ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಅಚ್ಚುಕಟ್ಟು ಪ್ರದೇಶದ ಅಭಿವೃದ್ಧಿಗೆ ಯತ್ನ

ಕಾಡಾ 100ನೇ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷೆ ಪವಿತ್ರ ರಾಮಯ್ಯ ಭರವಸೆ
Last Updated 21 ಜನವರಿ 2021, 2:33 IST
ಅಕ್ಷರ ಗಾತ್ರ

ಶಿವಮೊಗ್ಗ: ಆಡಳಿತ ಮತ್ತು ನಿರ್ದೇಶನದಡಿ 2020ರ ಅಂತ್ಯಕ್ಕೆ ಸರ್ಕಾರದಿಂದ ₹ 4.86 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಪೂರ್ಣ ಪ್ರಮಾಣದಲ್ಲಿ ಪ್ರಗತಿ ಸಾಧಿಸಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ
ತಿಳಿಸಿದರು.

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಾಧಿಕಾರದ 100ನೇ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಆಸ್ತಿಗಳ ಸೃಜನೆ ಕಾಮಗಾರಿಯಡಿ 2020ರ ಅಂತ್ಯಕ್ಕೆ ಸರ್ಕಾರದಿಂದ ₹ 63.58 ಲಕ್ಷ ಬಿಡುಗಡೆಯಾಗಿದೆ. ನಬಾರ್ಡ್‌ನಿಂದ ₹ 96.18 ಲಕ್ಷ ಬಿಡುಗಡೆಯಾಗಿದ್ದು, ₹ 59.26 ಲಕ್ಷ ಪ್ರಗತಿ ಸಾಧಿಸಲಾಗಿದೆ. ಎಸ್.ಡಿ.ಪಿ ಅಡಿ ಡಿಸೆಂಬರ್ 2020ರ ಅಂತ್ಯಕ್ಕೆ
₹ 2.57 ಕೋಟಿ ಬಿಡುಗಡೆಯಾಗಿದ್ದು, ₹ 2.28 ಕೋಟಿ ಪ್ರಗತಿ ಸಾಧಿಸಿದೆ. ಶಿವಮೊಗ್ಗ, ರಾಣೆಬೆನ್ನೂರು ವಿಭಾಗದಲ್ಲಿಬಸಿಗಾಲುವೆ, ಹೊಲಗಾಲುವೆ, ಭೂ ಸುಧಾರಣಾ,ಆಯಕಟ್ಟು ರಸ್ತೆ ಇನ್ನುಳಿದ ಕಾಮಗಾರಿಗಳಿಗೆ ₹ 24.6 ಕೋಟಿ ಬಿಡುಗಡೆಯಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.

ವೇತನ, ಕಾಮಗಾರಿ, ಪಿಎಂಕೆಎಸ್‌ವೈ, ನಬಾರ್ಡ್, ಎಸ್.ಡಿ.ಪಿ, ಎಸ್.ಡಿ.ಪಿ- ಎಸ್.ಸಿ.ಪಿ, ಎಸ್.ಡಿ.ಪಿ-ಟಿ.ಎಸ್.ಪಿ ಯೋಜನೆಗಳಿಗೆ ಹಣ ಬಿಡುಗಡೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಖಾಲಿ ಹುದ್ದೆ ಭರ್ತಿಗೆ ಕ್ರಮ: ಪ್ರಾಧಿಕಾರದಲ್ಲಿ 181 ಹುದ್ದೆಗಳಿದ್ದು, ಕೇವಲ 59 ಹುದ್ದೆ ಭರ್ತಿ ಮಾಡಲಾಗಿದೆ. ಇನ್ನುಳಿದ 122 ಹುದ್ದೆಯನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ನೂತನ ನಿರ್ದೇಶಕರ ಸಹಕಾರದೊಂದಿಗೆ ಮುಖ್ಯಮಂತ್ರಿಗಳ ಮನವೊಲಿಸಿ ಹೆಚ್ಚಿನ ಅನುದಾನ ತರುವ ಮೂಲಕ ಅಚ್ಚುಕಟ್ಟು ಭಾಗವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

ಜಿಲ್ಲಾ ಪ್ರವಾಸ: ಮುಂದಿನ ದಿನಗಳಲ್ಲಿ ಕಾಡಾ ವ್ಯಾಪ್ತಿಯ ಎಲ್ಲ 12 ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಅಭಿವೃದ್ಧಿ ಕಾರ್ಯಗಳು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅವಧಿ ಪೂರ್ವಗೊಳ್ಳುವರೆಗೂ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರದಿಂದ ನಾಮ ನಿರ್ದೇಶನಗೊಂಡಿರುವ ನೂತನ ಏಳು ನಿರ್ದೇಶಕರನ್ನು ಸನ್ಮಾನಿಸಲಾಯಿತು. ಕಾಡಾ ಆಡಳಿತಾಧಿಕಾರಿಗಳು, ನಿರ್ದೇಶಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT