<p><strong>ಸಾಗರ: ಶರಾವತಿ ಮುಳುಗಡೆ ಸಂತ್ರಸ್ತರ ತ್ಯಾಗದ ಪ್ರತೀಕವಾಗಿ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ಸಿಗಂದೂರು ಸೇತುವೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಪ್ರಯತ್ನ ನಡೆದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. </strong></p>.<p><strong>‘₹ 400 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಿಗಂದೂರು ಸೇತುವೆ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದೆ. ಮುಂದಿನ ಮಳೆಗಾಲದೊಳಗೆ ಸೇತುವೆ ಸಂಚಾರಕ್ಕೆ ಮುಕ್ತಗೊಳ್ಳಲಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</strong></p>.<p><strong>ಸಿಗಂದೂರು ಸೇತುವೆ ನಿರ್ಮಾಣದ ಯಶಸ್ಸಿನ ಹಿಂದೆ ಸ್ಥಳೀಯರ ಹೋರಾಟದ ಜೊತೆಗೆ ಹಲವರ ಪರಿಶ್ರಮವಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಸೇತುವೆ ಅಗತ್ಯದ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪರಿಣಾಮಕಾರಿಯಾಗಿ ಮನದಟ್ಟು ಮಾಡಿದ್ದು ಫಲ ನೀಡಿದೆ ಎಂದು ತಿಳಿಸಿದರು.</strong></p>.<p><strong>ಸಿಗಂದೂರು ಸೇತುವೆ ನಿರ್ಮಾಣದ ಭಾಗವಾಗಿರುವ ನಗರದ ಶಿವಪ್ಪನಾಯಕ ವೃತ್ತದಿಂದ ಮರಕುಟುಕದವರೆಗಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ₹ 700 ಕೋಟಿ ಮಂಜೂರಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.</strong></p>.<p><strong>ರಾಣೆಬೆನ್ನೂರು, ಶಿಕಾರಿಪುರ, ಆನಂದಪುರ, ಹೊಸನಗರ, ಬೈಂದೂರು ರಸ್ತೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಕೊಲ್ಲೂರು ಘಾಟಿಯಲ್ಲಿ ಹೆಚ್ಚಿನ ತಿರುವುಗಳು ಇರುವುದರಿಂದ ಆ ಭಾಗದಲ್ಲಿ ಕಾಮಗಾರಿ ವಿಳಂಬವಾಗುತ್ತಿದೆ ಎಂದರು.</strong></p>.<p><strong>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಅಮಾನುಷವಾದದ್ದು. ಈ ಕೃತ್ಯದ ಹಿಂದಿರುವ ಪಾಕಿಸ್ತಾನಕ್ಕೆ ಸರಿಯಾದ ಬುದ್ಧಿ ಕಲಿಸಲು ಪ್ರಧಾನಿ ಮುಂದಾಗಿದ್ದಾರೆ. ಇಡೀ ದೇಶದ ಜನ ಸರ್ಕಾರದ ಜೊತೆ ನಿಲ್ಲಬೇಕಾದ ಸಂದರ್ಭವಿದು ಎಂದು ಹೇಳಿದರು.</strong></p>.<p><strong>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್, ಪ್ರಮುಖರಾದ ಟಿ.ಡಿ. ಮೇಘರಾಜ್, ಹು.ಭಾ. ಅಶೋಕ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಶರಾವತಿ ಮುಳುಗಡೆ ಸಂತ್ರಸ್ತರ ತ್ಯಾಗದ ಪ್ರತೀಕವಾಗಿ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ಸಿಗಂದೂರು ಸೇತುವೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಪ್ರಯತ್ನ ನಡೆದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. </strong></p>.<p><strong>‘₹ 400 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಿಗಂದೂರು ಸೇತುವೆ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದೆ. ಮುಂದಿನ ಮಳೆಗಾಲದೊಳಗೆ ಸೇತುವೆ ಸಂಚಾರಕ್ಕೆ ಮುಕ್ತಗೊಳ್ಳಲಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.</strong></p>.<p><strong>ಸಿಗಂದೂರು ಸೇತುವೆ ನಿರ್ಮಾಣದ ಯಶಸ್ಸಿನ ಹಿಂದೆ ಸ್ಥಳೀಯರ ಹೋರಾಟದ ಜೊತೆಗೆ ಹಲವರ ಪರಿಶ್ರಮವಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಸೇತುವೆ ಅಗತ್ಯದ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪರಿಣಾಮಕಾರಿಯಾಗಿ ಮನದಟ್ಟು ಮಾಡಿದ್ದು ಫಲ ನೀಡಿದೆ ಎಂದು ತಿಳಿಸಿದರು.</strong></p>.<p><strong>ಸಿಗಂದೂರು ಸೇತುವೆ ನಿರ್ಮಾಣದ ಭಾಗವಾಗಿರುವ ನಗರದ ಶಿವಪ್ಪನಾಯಕ ವೃತ್ತದಿಂದ ಮರಕುಟುಕದವರೆಗಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗೆ ₹ 700 ಕೋಟಿ ಮಂಜೂರಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು.</strong></p>.<p><strong>ರಾಣೆಬೆನ್ನೂರು, ಶಿಕಾರಿಪುರ, ಆನಂದಪುರ, ಹೊಸನಗರ, ಬೈಂದೂರು ರಸ್ತೆ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ. ಕೊಲ್ಲೂರು ಘಾಟಿಯಲ್ಲಿ ಹೆಚ್ಚಿನ ತಿರುವುಗಳು ಇರುವುದರಿಂದ ಆ ಭಾಗದಲ್ಲಿ ಕಾಮಗಾರಿ ವಿಳಂಬವಾಗುತ್ತಿದೆ ಎಂದರು.</strong></p>.<p><strong>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಅಮಾನುಷವಾದದ್ದು. ಈ ಕೃತ್ಯದ ಹಿಂದಿರುವ ಪಾಕಿಸ್ತಾನಕ್ಕೆ ಸರಿಯಾದ ಬುದ್ಧಿ ಕಲಿಸಲು ಪ್ರಧಾನಿ ಮುಂದಾಗಿದ್ದಾರೆ. ಇಡೀ ದೇಶದ ಜನ ಸರ್ಕಾರದ ಜೊತೆ ನಿಲ್ಲಬೇಕಾದ ಸಂದರ್ಭವಿದು ಎಂದು ಹೇಳಿದರು.</strong></p>.<p><strong>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್, ಪ್ರಮುಖರಾದ ಟಿ.ಡಿ. ಮೇಘರಾಜ್, ಹು.ಭಾ. ಅಶೋಕ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>