ರೆ.ಎಫ್. ಕಿಟೆಲ್ ಪ್ರಶಸ್ತಿ ಸ್ವೀಕರಿಸಿದ ಲೇಖಕ ವಿಲಿಯಂ, ‘ಕನ್ನಡ ಭಾಷೆಯನ್ನು ಕಟ್ಟಿ ಬೆಳೆಸುವಲ್ಲಿ ಕ್ರೈಸ್ತ ಮಿಷನರಿಗಳ ಪಾತ್ರ ಪ್ರಮುಖವಾಗಿದೆ. ಕಿಟೆಲ್ ಅವರು ತಮ್ಮ ನಿಘಂಟಿನ ಮೂಲಕ ಸಾವಿರಾರು ಪದಗಳನ್ನು ಕನ್ನಡಕ್ಕೆ ಕೊಟ್ಟಿದ್ದಾರೆ. ಅಂತಹವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಸಾರ್ಥಕ ಕಾರ್ಯ’ ಎಂದು ಹೇಳಿದರು. ಲೇಖಕ ಡಾ.ಜಿ.ಎಸ್. ಭಟ್ ಅಭಿನಂದನಾ ಭಾಷಣ ಮಾಡಿದರು. ನಾ. ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಅಧ್ಯಕ್ಷ ಡಾ.ಸರ್ಫ್ರಾಜ್ ಚಂದ್ರಗುತ್ತಿ ಇದ್ದರು.