<p><strong>ಶಿವಮೊಗ್ಗ</strong>: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಕಚೇರಿ ಆವರಣದಲ್ಲಿರುವ ಬೃಹದಾಕಾರದ ಕೆಲವು ಮರಗಳನ್ನು ಕಡಿದಿರುವ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸಿಸಿಎಫ್ಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.</p>.<p>ವಾರದ ಹಿಂದೆ ಸಿಸಿಎಫ್ ಕಚೇರಿ ಆವರಣದಲ್ಲಿ ಸುಮಾರು 50 ವರ್ಷಗಳಷ್ಟು ಹಳೆಯದಾದ ಮೂರು ಮರಗಳನ್ನು ಕಡಿದು ಸಾಗಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರು ದಿನದೊಳಗೆ ಮಾಹಿತಿ ನೀಡುವಂತೆ ಅರಣ್ಯ ಸಚಿವರು ಸಿಸಿಎಫ್ ಕೆ.ಟಿ.ಹನುಮಂತಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಅದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p><strong>ಕಡಿದಿದ್ದು ಮಳೆ ಮರಗಳನ್ನು:</strong></p><p> ‘ಈಚೆಗೆ ಕಡಿದಿರುವುದು ಕಾಡು ಜಾತಿ ಮರಗಳನ್ನಲ್ಲ. ಬದಲಿಗೆ ಮಳೆ ಮರಗಳನ್ನು (Rain Tree). ಅಲಂಕಾರ, ನೆರಳಿಗಾಗಿ ಬೆಳೆಸುವ ಈ ಮರಗಳ ಟೊಂಗೆಗಳು ಮುರಿದು ಬಿದ್ದು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿದ್ದವು. ಮರ ಬಿದ್ದರೆ ಜೀವಕ್ಕೆ ಅಪಾಯ ಆಗುತ್ತಿತ್ತು. ನಿಯಮಾವಳಿ ಪ್ರಕಾರವೇ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಆ ಬಗ್ಗೆ ಅರಣ್ಯ ಸಚಿವರಿಗೆ ವರದಿ ಸಲ್ಲಿಸಲಾಗಿದೆ’ ಎಂದು ಹನುಮಂತಪ್ಪ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಕಚೇರಿ ಆವರಣದಲ್ಲಿರುವ ಬೃಹದಾಕಾರದ ಕೆಲವು ಮರಗಳನ್ನು ಕಡಿದಿರುವ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸಿಸಿಎಫ್ಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.</p>.<p>ವಾರದ ಹಿಂದೆ ಸಿಸಿಎಫ್ ಕಚೇರಿ ಆವರಣದಲ್ಲಿ ಸುಮಾರು 50 ವರ್ಷಗಳಷ್ಟು ಹಳೆಯದಾದ ಮೂರು ಮರಗಳನ್ನು ಕಡಿದು ಸಾಗಣೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರು ದಿನದೊಳಗೆ ಮಾಹಿತಿ ನೀಡುವಂತೆ ಅರಣ್ಯ ಸಚಿವರು ಸಿಸಿಎಫ್ ಕೆ.ಟಿ.ಹನುಮಂತಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಅದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p><strong>ಕಡಿದಿದ್ದು ಮಳೆ ಮರಗಳನ್ನು:</strong></p><p> ‘ಈಚೆಗೆ ಕಡಿದಿರುವುದು ಕಾಡು ಜಾತಿ ಮರಗಳನ್ನಲ್ಲ. ಬದಲಿಗೆ ಮಳೆ ಮರಗಳನ್ನು (Rain Tree). ಅಲಂಕಾರ, ನೆರಳಿಗಾಗಿ ಬೆಳೆಸುವ ಈ ಮರಗಳ ಟೊಂಗೆಗಳು ಮುರಿದು ಬಿದ್ದು ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿದ್ದವು. ಮರ ಬಿದ್ದರೆ ಜೀವಕ್ಕೆ ಅಪಾಯ ಆಗುತ್ತಿತ್ತು. ನಿಯಮಾವಳಿ ಪ್ರಕಾರವೇ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಆ ಬಗ್ಗೆ ಅರಣ್ಯ ಸಚಿವರಿಗೆ ವರದಿ ಸಲ್ಲಿಸಲಾಗಿದೆ’ ಎಂದು ಹನುಮಂತಪ್ಪ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>