ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಗಳಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ನಾವು ಈಗಾಗಲೇ ಅಡುಗೆ ಮಾಡಿದ್ದೇವೆ. ಅವರು ಬಡಿಸಲು ಬರುತ್ತಿದ್ದಾರೆ. ಇಂತಹ ಗೋಸುಂಬೆ ರಾಜಕಾರಣಿಯನ್ನು ಅತಿಥಿ ಉಪನ್ಯಾಸಕರು ನಂಬುತ್ತಾರೆಯೇ ಎಂದು ಕುಟುಕಿದರು.