<p><strong>ಶಿವಮೊಗ್ಗ:</strong> ತಾಲ್ಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ.</p><p>ಮೃತರನ್ನು ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ ನಿವಾಸಿಗಳಾದ ಅಸಿಫ್ (21) ಮತ್ತು ಚಾಂದ್ ಪೀರ್ (18) ಎಂದು ಗುರುತಿಸಲಾಗಿದೆ.</p><p>ಇಬ್ಬರೂ ಆಯನೂರಿನಿಂದ ಹಾರನಹಳ್ಳಿ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದರು. </p><p>ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಶಿವಮೊಗ್ಗ ತಾಲೂಕಿನ ಕ್ಯಾತಿನಕೆರೆ ಗ್ರಾಮದ ಗುರುಕಿರಣ್ (27) ಎಂದು ಗುರುತಿಸಲಾಗಿದೆ. ಈತ ಚಾಮೇನಹಳ್ಳಿಯಿಂದ ಆಯನೂರು ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ .</p><p>ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ತಕ್ಷಣ ಅಸಿಫ್ ಮತ್ತು ಚಾಂದ್ ಪೀರ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ, ಹಿಂದಿನಿಂದ ಅತೀ ವೇಗವಾಗಿ ಬಂದ ಯಾವುದೋ ವಾಹನವು ರಸ್ತೆಯ ಮೇಲೆ ಬಿದ್ದಿದ್ದ ಯುವಕರ ಮೇಲೆ ಹರಿದು ಹೋಗಿದೆ. ಆಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.</p><p>ಮೃತ ಯುವಕನ ಮೈಮೇಲೆ ವಾಹನದ ಟೈರ್ ಮಾರ್ಕ್ಗಳು ಅಚ್ಚಾಗಿರುವುದು ಘಟನೆಯ ಭೀಕರತೆ ಬಿಂಬಿಸುತ್ತದೆ. ಮತ್ತೊಂದು ಬೈಕ್ನಲ್ಲಿದ್ದ ಗುರುಕಿರಣ್ಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. </p><p>ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ತಾಲ್ಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ.</p><p>ಮೃತರನ್ನು ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ ನಿವಾಸಿಗಳಾದ ಅಸಿಫ್ (21) ಮತ್ತು ಚಾಂದ್ ಪೀರ್ (18) ಎಂದು ಗುರುತಿಸಲಾಗಿದೆ.</p><p>ಇಬ್ಬರೂ ಆಯನೂರಿನಿಂದ ಹಾರನಹಳ್ಳಿ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದರು. </p><p>ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಶಿವಮೊಗ್ಗ ತಾಲೂಕಿನ ಕ್ಯಾತಿನಕೆರೆ ಗ್ರಾಮದ ಗುರುಕಿರಣ್ (27) ಎಂದು ಗುರುತಿಸಲಾಗಿದೆ. ಈತ ಚಾಮೇನಹಳ್ಳಿಯಿಂದ ಆಯನೂರು ಕಡೆಗೆ ಬೈಕ್ ನಲ್ಲಿ ಬರುತ್ತಿದ್ದ .</p><p>ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ತಕ್ಷಣ ಅಸಿಫ್ ಮತ್ತು ಚಾಂದ್ ಪೀರ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ, ಹಿಂದಿನಿಂದ ಅತೀ ವೇಗವಾಗಿ ಬಂದ ಯಾವುದೋ ವಾಹನವು ರಸ್ತೆಯ ಮೇಲೆ ಬಿದ್ದಿದ್ದ ಯುವಕರ ಮೇಲೆ ಹರಿದು ಹೋಗಿದೆ. ಆಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.</p><p>ಮೃತ ಯುವಕನ ಮೈಮೇಲೆ ವಾಹನದ ಟೈರ್ ಮಾರ್ಕ್ಗಳು ಅಚ್ಚಾಗಿರುವುದು ಘಟನೆಯ ಭೀಕರತೆ ಬಿಂಬಿಸುತ್ತದೆ. ಮತ್ತೊಂದು ಬೈಕ್ನಲ್ಲಿದ್ದ ಗುರುಕಿರಣ್ಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. </p><p>ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>