<p><strong>ಶಿವಮೊಗ್ಗ:</strong> ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಡ್ತಿ ನೀಡಲು, ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಲು ಸಿದ್ಧತೆ ನಡೆದಿದೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಆರೋಪಿಸಿದರು.</p>.<p>‘ಸೇವಾ ಹಿರಿತನ ಕಡೆಗಣಿಸಿ ಸಹಾಯಕ ಎಂಜಿನಿಯರ್ ಹುದ್ದೆಯಿಂದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗೆಬಡ್ತಿ ನೀಡಲು ಹೊರಟಿದ್ದಾರೆ. ನಿವೃತ್ತಿ ಅಂಚಿನಲ್ಲಿರುವಅಧೀನ ಕಾರ್ಯದರ್ಶಿಯೊಬ್ಬರುಸೇವೆಯ ಕೊನೆಗಾಲದಲ್ಲಿ ಒಂದಷ್ಟು ಗಂಟು ಮಾಡಿಕೊಳ್ಳಲು ಹೊರಟಿದ್ದಾರೆ. ಈ ನಡೆಯಲ್ಲಿ ಭ್ರಷ್ಟಾಚಾರದ ವಾಸನೆ ಕಾಣುತ್ತಿದೆ. ಇದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೂ ಕೆಟ್ಟ ಹೆಸರು ತರುತ್ತದೆ. ಸರ್ಕಾರವೂ ತಲೆತಗ್ಗಿಸಬೇಕಾಗುತ್ತದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.</p>.<p>‘ಸೇವಾ ಹಿರಿತನವನ್ನು ಕಡೆಗಣಿಸಿ ಈಗ ಮೂರ್ನಾಲ್ಕು ವರ್ಷಗಳ ಹಿಂದೆ ಕೆಲಸಕ್ಕೆ ಸೇರಿದವರಿಗೂ ಬಡ್ತಿ ನೀಡಲು ಹೊರಟಿದ್ದಾರೆ. ಅವರಲ್ಲಿ ಕೆಲವರು ಪ್ರೊಬೇಷನರಿಅವಧಿಯನ್ನೂ ಮುಗಿಸಿಲ್ಲ.ಬಡ್ತಿ ನೀಡುವ ಕುರಿತು ಮೇ 7ರಂದು ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಭೆಯನ್ನೂ ನಡೆಸಲಾಗಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬಡ್ತಿ ನೀಡಲು, ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಲು ಸಿದ್ಧತೆ ನಡೆದಿದೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಆರೋಪಿಸಿದರು.</p>.<p>‘ಸೇವಾ ಹಿರಿತನ ಕಡೆಗಣಿಸಿ ಸಹಾಯಕ ಎಂಜಿನಿಯರ್ ಹುದ್ದೆಯಿಂದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗೆಬಡ್ತಿ ನೀಡಲು ಹೊರಟಿದ್ದಾರೆ. ನಿವೃತ್ತಿ ಅಂಚಿನಲ್ಲಿರುವಅಧೀನ ಕಾರ್ಯದರ್ಶಿಯೊಬ್ಬರುಸೇವೆಯ ಕೊನೆಗಾಲದಲ್ಲಿ ಒಂದಷ್ಟು ಗಂಟು ಮಾಡಿಕೊಳ್ಳಲು ಹೊರಟಿದ್ದಾರೆ. ಈ ನಡೆಯಲ್ಲಿ ಭ್ರಷ್ಟಾಚಾರದ ವಾಸನೆ ಕಾಣುತ್ತಿದೆ. ಇದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೂ ಕೆಟ್ಟ ಹೆಸರು ತರುತ್ತದೆ. ಸರ್ಕಾರವೂ ತಲೆತಗ್ಗಿಸಬೇಕಾಗುತ್ತದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.</p>.<p>‘ಸೇವಾ ಹಿರಿತನವನ್ನು ಕಡೆಗಣಿಸಿ ಈಗ ಮೂರ್ನಾಲ್ಕು ವರ್ಷಗಳ ಹಿಂದೆ ಕೆಲಸಕ್ಕೆ ಸೇರಿದವರಿಗೂ ಬಡ್ತಿ ನೀಡಲು ಹೊರಟಿದ್ದಾರೆ. ಅವರಲ್ಲಿ ಕೆಲವರು ಪ್ರೊಬೇಷನರಿಅವಧಿಯನ್ನೂ ಮುಗಿಸಿಲ್ಲ.ಬಡ್ತಿ ನೀಡುವ ಕುರಿತು ಮೇ 7ರಂದು ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಭೆಯನ್ನೂ ನಡೆಸಲಾಗಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>