ಶ್ರೀಮಂತರ ಮನೆಗಳಲ್ಲಿಕಸ, ಮುಸುರೆ ಕೆಲಸ ಮಾಡುವ ಹೆಣ್ಣು ಮಕ್ಕಳು, ಟೈಲರ್ಗಳು,ಹಮಾಲರು, ಚಿನ್ನ ಬೆಳ್ಳಿ ಕೆಲಸ ಮಾಡುವವರು, ನೋಂದಾಯಿಸದ ಕ್ಷೌರಿಕರು, ಕುಂಬಾರರು ನಿತ್ಯದದುಡಿಮೆ ನಂಬಿಕೊಂಡು ಬದುಕು ಕಟ್ಟಿಕೊಂಡಿದ್ದರು. ಈಗ ಕೆಲಸ ಕಳೆದುಕೊಂಡು ಒಂದು ಹೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದಾರೆ.
ಎಪಿಎಂಸಿಯಲ್ಲೂನೋಂದಾಯಿಸದ ಹಮಾಲರು, ತೂಕ ಮಾಡುವವರು, ದಿನಗೂಲಿ ಕೆಲಸ ಮಾಡುವವರು ಇದ್ದಾರೆ. ಅವರೆಲ್ಲರಿಗೂ ಆಯಾ ಎಪಿಎಂಸಿಗಳೇ ಹಣದ ನೆರವು ನೀಡುವಂತೆ ನಿರ್ದೇಶನ ನೀಡಬೇಕು. ಸಚಿವರು ಗಮನ ಹರಿಸಬೇಕು ಎಂದು ಆಗ್ರಹಿಸಿದರು.