<p><strong>ಶಿವಮೊಗ್ಗ</strong>: ಮುಂಬರುವ ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ, ಮತದಾರರ ಚೇತನ ಮಹಾ ಅಭಿಯಾನ ಹಮ್ಮಿಕೊಂಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಜೊತೆಗೆ ಹೊಸ ಮತದಾರರ ಸೇರ್ಪಡೆಯನ್ನು ಈ ಅಭಿಯಾನದ ಮೂಲಕ ನಡೆಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆ, ವಿಧಾನಸಭೆ ಮತ್ತು ಶಕ್ತಿ ಕೇಂದ್ರಗಳಲ್ಲಿ ಸಮಿತಿಗಳ ರಚಿಸಲಾಗಿದೆ. ವಿಧಾನಸಭಾ ಮಟ್ಟದಲ್ಲಿ ಬಿಎಲ್ಎ-1, ಬಿಎಲ್ಎ-2 ನೇಮಕವಾಗಿದೆ. ಶಕ್ತಿ ಕೇಂದ್ರ ಮಟ್ಟದಲ್ಲಿ ಕಾರ್ಯಾಗಾರ ನಡೆದಿವೆ ಎಂದರು.</p>.<p>ಅಭಿಯಾನದ ಅಂಗವಾಗಿ ಪಕ್ಷದ ಕಾರ್ಯಕರ್ತರ ಮನೆ ಮನೆಗೆ ಪ್ರಚಾರ, ಸಾಮಾಜಿಕ ಜಾಲತಾಣಗಳ ಬಳಕೆಯ ಮೂಲಕ ಮತದಾರರನ್ನು ತಲುಪಲಿದ್ದಾರೆ. ಹೊಸ ಮತದಾರರ ಸೇರ್ಪಡೆ ಜೊತೆಗೆ ನಕಲಿ ಮತದಾರರನ್ನು ತೆಗೆಯುವುದು, ವರ್ಗಾವಣೆ ಪ್ರಕ್ರಿಯೆ ಈ ಎಲ್ಲ ಪ್ರಕ್ರಿಯೆಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಪರಿಣಾಮಕಾರಿಯಾಗಿ ಮಾಡಲಿದ್ದಾರೆ ಎಂದರು.<br> <br>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ.ಮೇಘರಾಜ್, ಶಿವರಾಜ್, ಬಿ.ಕೆ.ಶ್ರೀನಾಥ್, ಜ್ಞಾನೇಶ್ವರ್, ಹೃಷಿಕೇಶ್ ಪೈ, ವೀರಭದ್ರಪ್ಪ ಪೂಜಾರಿ, ಚಂದ್ರಶೇಖರ್, ಮಾಲತೇಶ್, ಅಣ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಮುಂಬರುವ ಲೋಕಸಭೆ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ, ಮತದಾರರ ಚೇತನ ಮಹಾ ಅಭಿಯಾನ ಹಮ್ಮಿಕೊಂಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಜೊತೆಗೆ ಹೊಸ ಮತದಾರರ ಸೇರ್ಪಡೆಯನ್ನು ಈ ಅಭಿಯಾನದ ಮೂಲಕ ನಡೆಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆ, ವಿಧಾನಸಭೆ ಮತ್ತು ಶಕ್ತಿ ಕೇಂದ್ರಗಳಲ್ಲಿ ಸಮಿತಿಗಳ ರಚಿಸಲಾಗಿದೆ. ವಿಧಾನಸಭಾ ಮಟ್ಟದಲ್ಲಿ ಬಿಎಲ್ಎ-1, ಬಿಎಲ್ಎ-2 ನೇಮಕವಾಗಿದೆ. ಶಕ್ತಿ ಕೇಂದ್ರ ಮಟ್ಟದಲ್ಲಿ ಕಾರ್ಯಾಗಾರ ನಡೆದಿವೆ ಎಂದರು.</p>.<p>ಅಭಿಯಾನದ ಅಂಗವಾಗಿ ಪಕ್ಷದ ಕಾರ್ಯಕರ್ತರ ಮನೆ ಮನೆಗೆ ಪ್ರಚಾರ, ಸಾಮಾಜಿಕ ಜಾಲತಾಣಗಳ ಬಳಕೆಯ ಮೂಲಕ ಮತದಾರರನ್ನು ತಲುಪಲಿದ್ದಾರೆ. ಹೊಸ ಮತದಾರರ ಸೇರ್ಪಡೆ ಜೊತೆಗೆ ನಕಲಿ ಮತದಾರರನ್ನು ತೆಗೆಯುವುದು, ವರ್ಗಾವಣೆ ಪ್ರಕ್ರಿಯೆ ಈ ಎಲ್ಲ ಪ್ರಕ್ರಿಯೆಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಪರಿಣಾಮಕಾರಿಯಾಗಿ ಮಾಡಲಿದ್ದಾರೆ ಎಂದರು.<br> <br>ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ.ಮೇಘರಾಜ್, ಶಿವರಾಜ್, ಬಿ.ಕೆ.ಶ್ರೀನಾಥ್, ಜ್ಞಾನೇಶ್ವರ್, ಹೃಷಿಕೇಶ್ ಪೈ, ವೀರಭದ್ರಪ್ಪ ಪೂಜಾರಿ, ಚಂದ್ರಶೇಖರ್, ಮಾಲತೇಶ್, ಅಣ್ಣಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>