ಅಭಿಯಾನದ ಅಂಗವಾಗಿ ಪಕ್ಷದ ಕಾರ್ಯಕರ್ತರ ಮನೆ ಮನೆಗೆ ಪ್ರಚಾರ, ಸಾಮಾಜಿಕ ಜಾಲತಾಣಗಳ ಬಳಕೆಯ ಮೂಲಕ ಮತದಾರರನ್ನು ತಲುಪಲಿದ್ದಾರೆ. ಹೊಸ ಮತದಾರರ ಸೇರ್ಪಡೆ ಜೊತೆಗೆ ನಕಲಿ ಮತದಾರರನ್ನು ತೆಗೆಯುವುದು, ವರ್ಗಾವಣೆ ಪ್ರಕ್ರಿಯೆ ಈ ಎಲ್ಲ ಪ್ರಕ್ರಿಯೆಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಪರಿಣಾಮಕಾರಿಯಾಗಿ ಮಾಡಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ.ಮೇಘರಾಜ್, ಶಿವರಾಜ್, ಬಿ.ಕೆ.ಶ್ರೀನಾಥ್, ಜ್ಞಾನೇಶ್ವರ್, ಹೃಷಿಕೇಶ್ ಪೈ, ವೀರಭದ್ರಪ್ಪ ಪೂಜಾರಿ, ಚಂದ್ರಶೇಖರ್, ಮಾಲತೇಶ್, ಅಣ್ಣಪ್ಪ ಇದ್ದರು.