‘ಮೋದಿ ಹೇಳಿದರೂ ಸ್ಪರ್ಧೆ ಶತಃಸಿದ್ಧ’
‘ಬ್ರಹ್ಮ ಮಾತ್ರವಲ್ಲ ಪ್ರಧಾನಿ ನರೇಂದ್ರ ಮೋದಿಯೇ ಬಂದು ಹೇಳಿದರೂ ಚುನಾವಣೆ ಕಣದಿಂದ ಹಿಂದಕ್ಕೆ ಸರಿಯುವುದಿಲ್ಲ. ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಶತಃಸಿದ್ಧ’ ಎಂದು ಕೆ.ಎಸ್.ಈಶ್ವರಪ್ಪ ಘೋಷಿಸಿದರು. ಇಲ್ಲಿನ ಗುಂಡಪ್ಪ ಶೆಡ್ನ ನಿವಾಸದಲ್ಲಿ ಗುರುವಾರ ಅವರು ಚುನಾವಣಾ ಕಚೇರಿ ಉದ್ಘಾಟಿಸಿದರು. ಆಗ ಬೆಂಬಲಿಗರೊಬ್ಬರು ‘ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯಲು ಹೇಳಿದರೆ ಅವರು ಒಪ್ಪಿಕೊಳ್ಳುತ್ತಾರೇನೋ ಎಂಬ ಅನುಮಾನ ಈಗಲೂ ಇದೆ. ಅದು ದೈವ ನಿಶ್ಚಯ’ ಎಂದರು. ಹೀಗಾಗಿ ತಮ್ಮ ಭಾಷಣದಲ್ಲಿ ಮೇಲಿನಂತೆ ಶಪಥ ಮಾಡಿದ ಕೆ.ಎಸ್.ಈಶ್ವರಪ್ಪ ‘ನರೇಂದ್ರ ಮೋದಿ ಹೇಳಿದ ಕೂಡಲೇ ನಾಮಪತ್ರ ವಾಪಸ್ ಪಡೆಯುತ್ತೇನೆ ಎಂಬುದೆಲ್ಲ ಸುಳ್ಳು’ ಎಂದು ಸ್ಪಷ್ಟಪಡಿಸಿದರು.