ನೆಲ್ಲಿಸರ ಕ್ಯಾಂಪ್ನಿಂದ ತೀರ್ಥಹಳ್ಳಿವರೆಗೆ ಹಾಗೂ ತ್ಯಾವರೆಕೊಪ್ಪದ ಹುಲಿ–ಸಿಂಹಧಾಮದಿಂದ ತಾಳಗುಪ್ಪದವರೆಗೆ ದ್ವಿಪಥ ರಸ್ತೆಗಳನ್ನು ಚತುಷ್ಪಥ ರಸ್ತೆಗಳನ್ನಾಗಿ ವಿಸ್ತರಿಸುವ ಕಾಮಗಾರಿಗೆ ಇದೇ ವೇಳೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಬೈಂದೂರು-ರಾಣೆಬೆನ್ನೂರು ವಿಭಾಗದಲ್ಲಿ ₹ 19.77 ಕೋಟಿ ವೆಚ್ಚದಲ್ಲಿ ಸೇತುವೆಗಳು, ಶಿವಮೊಗ್ಗ-ಮಂಗಳೂರು ರಸ್ತೆಯಲ್ಲಿ ತುಂಗಾ ನದಿ ಸೇತುವೆ, ಶಿವಮೊಗ್ಗ-ಚಿತ್ರದುರ್ಗ ನಡುವಿನ ರೈಲ್ವೆ ಮೇಲ್ಸೇತುವೆ (ಡಿಸೆಂಬರ್ ಅಂತ್ಯದೊಳಗೆ ಪೂರ್ಣ), ಶಿವಮೊಗ್ಗ ಬೈಪಾಸ್ನಲ್ಲಿ ತುಂಗಾನದಿಗೆ ಸೇತುವೆ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೆ ಸಿದ್ಧವಾಗಿವೆ ಎಂದು ಅವರು ಮಾಹಿತಿ ನೀಡಿದರು.