ಶಿವಮೊಗ್ಗ: ಸರ್ಕಾರದ ಮೇಲೆ ಈಗ ಶೇ 40 ಕಮಿಷನ್ ಆರೋಪ ಮಾಡಿ ಬೊಬ್ಬೆ ಹೊಡೆಯುತ್ತಿರುವ ಗುತ್ತಿಗೆದಾರರು, ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅಧಿಕಾರದ ಅವಧಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದ ಆ ಪಕ್ಷದ ಪುಡಾರಿಗಳು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರಆರೋಪಿಸಿದರು. ಅವರ (ಗುತ್ತಿಗೆದಾರರ) ಹಿನ್ನೆಲೆಯ ಬಗ್ಗೆ ಬೆಳಕು ಚೆಲ್ಲುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.