ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಅ.30ರಂದು ಹಿಂದುಳಿದ ವರ್ಗಗಳ ಸತ್ಯಾಗ್ರಹ– ಸಿದ್ದರಾಮಯ್ಯ ಭಾಗಿ

Last Updated 28 ಅಕ್ಟೋಬರ್ 2021, 14:26 IST
ಅಕ್ಷರ ಗಾತ್ರ

ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ಅ.30ರಂದು ಬೆಳಿಗ್ಗೆ 11ಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಭಾಗವಹಿಸುವರು.

‘ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿವಾರು ಸಮೀಕ್ಷೆಯ ವರದಿ ಕೂಡಲೇ ಜಾರಿಗೊಳಿಸಬೇಕು. 2 ‘ಎ’ ಮೀಸಲಾತಿ ಪಟ್ಟಿಗೆ ಆರ್ಥಿಕವಾಗಿ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮುಂದುವರಿದ ಪ್ರಬಲವಾಗಿರುವ ಜಾತಿಗಳನ್ನು ಸೇರಿಸಬಾರದು ಎಂದು ಆಗ್ರಹಿಸಿ ಧರಣಿ ನಡೆಸಲಾಗುತ್ತಿದೆ. ಸುಮಾರು 10 ಸಾವಿರ ಜನರು ಧರಣಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ರಾಜ್ಯ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಮಾಹಿತಿ ನೀಡಿದರು.

ಪ್ರವರ್ಗ 1 ಮತ್ತು 2 ‘ಎ’ನಲ್ಲಿ ಸುಮಾರು 2 ಕೋಟಿ ಜನಸಂಖ್ಯೆ ಇದೆ. ಅವುಗಳ ಅಭಿವೃದ್ಧಿಗೆ ₹ 80 ಕೋಟಿ ಮೀಸಲಿಡಲಾಗಿದೆ. ₹ 20 ಕೋಟಿ ಬಿಡುಗಡೆ ಮಡಲಾಗಿದೆ. ಈ ವರ್ಗಗಳ ಅಭಿವೃದ್ಧಿಗಾಗಿ ದೇವರಾಜು ಅರಸು ಅಭಿವೃದ್ಧಿ ನಿಗಮಕ್ಕೆ ₹ 2 ಸಾವಿರ ಕೋಟಿ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT