<p><strong>ರಿಪ್ಪನ್ಪೇಟೆ:</strong> ಪಟ್ಟಣದ ಮುಸ್ಲಿಮರು ಶನಿವಾರ ಅತ್ಯಂತ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಿಸಿದರು. </p>.<p>ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಹಾಗೂ ಗಾಳಿಬೈಲು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಮುಸ್ಲಿಮರು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.</p>.<p>ನಂತರ ನಡೆದ ಧರ್ಮಸಭೆಯಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ ಮಾತನಾಡಿ, ಪ್ರತಿಯೊಂದು ಹಬ್ಬಗಳು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿವೆ. ಜಾತೀಯತೆಯನ್ನು ಬಿಟ್ಟು ಧರ್ಮವನ್ನು ಗೌರವಿಸುವ ಪರಿಪಾಠ ಬೆಳೆಯಬೇಕು. ಸಹೋದರತ್ವ ಸಹಬಾಳ್ವೆ ನಡೆಸಬೇಕು ಎಂದರು. </p>.<p>ಇದೇ ಸಂದರ್ಭದಲ್ಲಿ ರಿಪ್ಪನ್ ಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರದ ₹50,000 ಅನುದಾನದಲ್ಲಿ ಅಳವಡಿಸಲಾಗಿದ್ದ ಹೈಮಾಸ್ಟ್ ದೀಪವನ್ನು ಉದ್ಘಾಟಿಸಲಾಯಿತು. </p>.<p>ಬಕ್ರೀದ್ ಹಿನ್ನೆಲೆಯಲ್ಲಿ ರಿಪ್ಪನ್ಪೇಟೆ, ಅಮೃತ, ಎಣ್ಣೆನೊಡ್ಲು, ಕೆಂಚನಾಲ, ಗಾಳಿಬೈಲು, ಕೋಡೂರು, ಸುಣ್ಣದಬಸ್ತಿ ಗ್ರಾಮದಲ್ಲಿ ಮುಸ್ಲಿಮರು ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಪಟ್ಟಣದ ಮುಸ್ಲಿಮರು ಶನಿವಾರ ಅತ್ಯಂತ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಿಸಿದರು. </p>.<p>ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಹಾಗೂ ಗಾಳಿಬೈಲು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಮುಸ್ಲಿಮರು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.</p>.<p>ನಂತರ ನಡೆದ ಧರ್ಮಸಭೆಯಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫಿ ಮಾತನಾಡಿ, ಪ್ರತಿಯೊಂದು ಹಬ್ಬಗಳು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿವೆ. ಜಾತೀಯತೆಯನ್ನು ಬಿಟ್ಟು ಧರ್ಮವನ್ನು ಗೌರವಿಸುವ ಪರಿಪಾಠ ಬೆಳೆಯಬೇಕು. ಸಹೋದರತ್ವ ಸಹಬಾಳ್ವೆ ನಡೆಸಬೇಕು ಎಂದರು. </p>.<p>ಇದೇ ಸಂದರ್ಭದಲ್ಲಿ ರಿಪ್ಪನ್ ಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರದ ₹50,000 ಅನುದಾನದಲ್ಲಿ ಅಳವಡಿಸಲಾಗಿದ್ದ ಹೈಮಾಸ್ಟ್ ದೀಪವನ್ನು ಉದ್ಘಾಟಿಸಲಾಯಿತು. </p>.<p>ಬಕ್ರೀದ್ ಹಿನ್ನೆಲೆಯಲ್ಲಿ ರಿಪ್ಪನ್ಪೇಟೆ, ಅಮೃತ, ಎಣ್ಣೆನೊಡ್ಲು, ಕೆಂಚನಾಲ, ಗಾಳಿಬೈಲು, ಕೋಡೂರು, ಸುಣ್ಣದಬಸ್ತಿ ಗ್ರಾಮದಲ್ಲಿ ಮುಸ್ಲಿಮರು ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>