ಬಳ್ಳಾರಿಯ ಮಾನಕರಿ ಹುಲಿಕುಂಟಾಚಾರ್ಯ ಮತ್ತು ಸಾವಿತ್ರಮ್ಮ ದಂಪತಿಯ ಪುತ್ರರಾದ ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾಗಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. 2005ರಲ್ಲಿ ಹಂಪಿ ವಿಶ್ವವಿದ್ಯಾಲಯದಿಂದ ‘ಹರಿದಾಸ ಸಾಹಿತ್ಯ – ಶ್ರೀಮದ್ಭಗವತ’ ಋಣ ಮತ್ತು ವೃದ್ಧಿ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದುಕೊಂಡಿದ್ದಾರೆ. ಅವರಿಗೆ ಮಂತ್ರಾಲಯ ಮಠವು ‘ಸುಜಯಶ್ರೀ’ ಪ್ರಶಸ್ತಿ, ತಿರುಪತಿ ತಿರುಮಲ ದೇವಸ್ಥಾನ ಪುರಂದರ ಪ್ರಶಸ್ತಿ ನೀಡಿ ಗೌರವಿಸಿದೆ.