ಶಿವಮೊಗ್ಗ: ಆಗುಂಬೆ ಮಾರ್ಗದಲ್ಲಿ 12 ಟನ್ಗಿಂತ ಅಧಿಕ ಭಾರದ ವಾಹನಗಳ ಸಂಚಾರ ಮತ್ತೆ ನಿಷೇಧಿಸಲಾಗಿದೆ.
ಆಗುಂಬೆ ಘಾಟಿ ರಸ್ತೆ ಕಿರಿದಾಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ಕುಸಿಯುವ ಸಾಧ್ಯತೆ ಇದೆ. ಹಾಗಾಗಿ, ಅಧಿಕ ಭಾರದ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ವಾಹನಗಳು ಶಿವಮೊಗ್ಗ-ತೀರ್ಥಹಳ್ಳಿ – ಆಗುಂಬೆ- ಶೃಂಗೇರಿ- ಕೆರೆಕಟ್ಟೆ- ಕಾರ್ಕಳ- ಉಡುಪಿ- ಮಂಗಳೂರು ಅಥವಾ ಮಾಸ್ತಿಕಟ್ಟೆ – ಹುಲಿಕಲ್ – ಹೊಸಂಗಡಿ – ಸಿದ್ಧಾಪುರ – ಉಡುಪಿ ಮಾರ್ಗಗಳ ಮೂಲಕ ಸಂಚರಿಸುವಂತೆ ಸೂಚಿಸಿದ್ದಾರೆ.