ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ ಇಳಿಯುವುದಿಲ್ಲ. ಆದರೆ, ಖಾಸಗಿ ಬಸ್ಗಳ ಸೇವೆ ಎಂದಿನಂತೆ ಮುಂದುವರಿಯಲಿದೆ. ಕೆಲವು ಆಟೊ ರಿಕ್ಷಾಗಳ ಸೇವೆ ಇರುವುದಿಲ್ಲ. ಶಾಲಾ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸದ ಕಾರಣ ಎಂದಿನಂತೆ ತೆರೆದಿರುತ್ತವೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ. ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಕಾರ್ಯನಿರ್ವಹಿಸಲಿವೆ. ಬ್ಯಾಂಕ್ ನೌಕರರ ಸಂಘಟನೆಗಳು, ಅಂಚೆ ನೌಕರರ ಸಂಘಟನೆ ಬಂದ್ಗೆ ಬೆಂಬಲ ನೀಡಿದೆ. ಆದರೆ, ಬ್ಯಾಂಕ್ ವಹಿವಾಟು ಕ್ಷೀಣಿಸುವ ಸಾಧ್ಯತೆ ಇದೆ. ಅಂಗಡಿ ಮುಂಗಟ್ಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗಿಲು ಮುಚ್ಚುವ ಸಾಧ್ಯತೆ ಕಂಡುಬಂದಿಲ್ಲ.