<p><strong>ಶಿವಮೊಗ್ಗ</strong>: ‘ಎಸ್.ಬಂಗಾರಪ್ಪ ಫೌಂಡೇಷನ್, ಬಂಗಾರಪ್ಪ ವಿಚಾರ ವೇದಿಕೆ ಹಾಗೂ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಡಿ.26ರಂದು ಸಂಜೆ 4ಕ್ಕೆ ಸೊರಬದ ಬಂಗಾರ ಧಾಮದಲ್ಲಿ ಎಸ್.ಬಂಗಾರಪ್ಪ ಸವಿ ನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಬಂಗಾರಪ್ಪ ವಿಚಾರ ವೇದಿಕೆ ಮುಖ್ಯಸ್ಥ ನಾಗರಾಜ್ ಮೂರ್ತಿ ತಿಳಿಸಿದರು.</p><p>‘ಬಂಗಾರಪ್ಪ, ಸಮಾಜವಾದಿ ಚಿಂತನೆ ಮೂಲಕ ರಾಜ್ಯ ರಾಜಕಾರಣಕ್ಕೆ ಸ್ಪಷ್ಟ ದಿಕ್ಕು ತೋರಿಸಿದ್ದರು. ಬಡವರ ಪಾಲಿಗೆ ಆಶಾಕಿರಣವಾಗಿದ್ದರು. ಶಾಂತವೇರಿ ಗೋಪಾಲಗೌಡರ ಹೋರಾಟದ ಕುಲುಮೆಯಲ್ಲಿ ಅರಳಿದ್ದರು. ಅವರ 12ನೇ ವರ್ಷದ ಪುಣ್ಯ ಸ್ಮರಣೆಯ ನೆನಪಿಗೆ ಸೊರಬದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.</p><p>‘ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಸಚಿವ ಎಚ್.ಕೆ.ಪಾಟೀಲ, ಮಾಜಿ ಸಚಿವ ಅರವಿಂದ ಲಿಂಬಾವಳಿ ಉಪಸ್ಥಿತರಿ ರುವರು. ಗೀತಾ ಶಿವರಾಜ್ಕುಮಾರ್ ಅಭಿನಂದನಾ ನುಡಿಗಳನ್ನಾಡುವರು. ಅನೀಶ್ ವಿದ್ಯಾಶಂಕರ್ ಸಂಗೀತ ಕಾರ್ಯಕ್ರಮ ಇರುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ‘ಎಸ್.ಬಂಗಾರಪ್ಪ ಫೌಂಡೇಷನ್, ಬಂಗಾರಪ್ಪ ವಿಚಾರ ವೇದಿಕೆ ಹಾಗೂ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಡಿ.26ರಂದು ಸಂಜೆ 4ಕ್ಕೆ ಸೊರಬದ ಬಂಗಾರ ಧಾಮದಲ್ಲಿ ಎಸ್.ಬಂಗಾರಪ್ಪ ಸವಿ ನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಬಂಗಾರಪ್ಪ ವಿಚಾರ ವೇದಿಕೆ ಮುಖ್ಯಸ್ಥ ನಾಗರಾಜ್ ಮೂರ್ತಿ ತಿಳಿಸಿದರು.</p><p>‘ಬಂಗಾರಪ್ಪ, ಸಮಾಜವಾದಿ ಚಿಂತನೆ ಮೂಲಕ ರಾಜ್ಯ ರಾಜಕಾರಣಕ್ಕೆ ಸ್ಪಷ್ಟ ದಿಕ್ಕು ತೋರಿಸಿದ್ದರು. ಬಡವರ ಪಾಲಿಗೆ ಆಶಾಕಿರಣವಾಗಿದ್ದರು. ಶಾಂತವೇರಿ ಗೋಪಾಲಗೌಡರ ಹೋರಾಟದ ಕುಲುಮೆಯಲ್ಲಿ ಅರಳಿದ್ದರು. ಅವರ 12ನೇ ವರ್ಷದ ಪುಣ್ಯ ಸ್ಮರಣೆಯ ನೆನಪಿಗೆ ಸೊರಬದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.</p><p>‘ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಸಚಿವ ಎಚ್.ಕೆ.ಪಾಟೀಲ, ಮಾಜಿ ಸಚಿವ ಅರವಿಂದ ಲಿಂಬಾವಳಿ ಉಪಸ್ಥಿತರಿ ರುವರು. ಗೀತಾ ಶಿವರಾಜ್ಕುಮಾರ್ ಅಭಿನಂದನಾ ನುಡಿಗಳನ್ನಾಡುವರು. ಅನೀಶ್ ವಿದ್ಯಾಶಂಕರ್ ಸಂಗೀತ ಕಾರ್ಯಕ್ರಮ ಇರುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>