<p><strong>ಶಿವಮೊಗ್ಗ: ‘</strong>ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಬಂಗಾರಪ್ಪ ಅವರ ಹೆಸರನ್ನು ಸರ್ಕಾರದ ಯಾವುದಾದರೂ ಯೋಜನೆಗೆ ಇಡಬೇಕು’ ಎಂದು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.</p>.<p>ಈ ಸಂಬಂಧ ಮನವಿ ಸಲ್ಲಿಸಿರುವ ಸಂಘದ ಅಧ್ಯಕ್ಷ ಶ್ರೀಧರ್ ಆರ್.ಹುಲ್ತಿಕೊಪ್ಪ ಅವರು, ಯೋಜನೆಗೆ ಹೆಸರಿಡುವ ಮೂಲಕ ಹಿಂದುಳಿದ ವರ್ಗದ ನೇತಾರರಾಗಿದ್ದ ಬಂಗಾರಪ್ಪ ಅವರ ಹೆಸರು ಅಜರಾಮರವಾಗಿಸಬೇಕು ಎಂದು ಕೋರಿದ್ದಾರೆ.</p>.<p>‘ಅ.26 ರಂದು ಬಂಗಾರಪ್ಪ ಅವರ 93ನೇ ಜನ್ಮದಿನ. ಈ ಸಂದರ್ಭದಲ್ಲಿ ರಾಜ್ಯದ ಒಂದು ಸರ್ಕಾರಿ ಯೋಜನೆಗೆ ಅವರ ಹೆಸರು ಇಟ್ಟರೆ ಅವರಿಗೆ ಹಾಗೂ ಆ ಮೂಲಕ ಇಡೀ ಹಿಂದುಳಿದ ಸಮುದಾಯಕ್ಕೆ ಗೌರವವನ್ನು ಸಲ್ಲಿಸಿದಂತಾಗುತ್ತಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಬಂಗಾರಪ್ಪ ಅವರು ಜಾರಿಗೆ ತಂದಿದ್ದ ‘ಆಶ್ರಯ’, ‘ಆರಾಧನಾ’, ‘ವಿಶ್ವ’ ಯೋಜನೆಗಳ ಮೂಲಕ ಜನರು ಅವರನ್ನು ಸದಾ ಸ್ಮರಿಸುತ್ತಿದೆ. ಹಿಂದೆ ಆಡಳಿತ ನಡೆಸಿದ ಸರ್ಕಾರಗಳು ಬಂಗಾರಪ್ಪ ಅವರನ್ನು ನಿರ್ಲಕ್ಷಿಸಿವೆ’ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: ‘</strong>ಮಾಜಿ ಮುಖ್ಯಮಂತ್ರಿ, ದಿವಂಗತ ಎಸ್.ಬಂಗಾರಪ್ಪ ಅವರ ಹೆಸರನ್ನು ಸರ್ಕಾರದ ಯಾವುದಾದರೂ ಯೋಜನೆಗೆ ಇಡಬೇಕು’ ಎಂದು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.</p>.<p>ಈ ಸಂಬಂಧ ಮನವಿ ಸಲ್ಲಿಸಿರುವ ಸಂಘದ ಅಧ್ಯಕ್ಷ ಶ್ರೀಧರ್ ಆರ್.ಹುಲ್ತಿಕೊಪ್ಪ ಅವರು, ಯೋಜನೆಗೆ ಹೆಸರಿಡುವ ಮೂಲಕ ಹಿಂದುಳಿದ ವರ್ಗದ ನೇತಾರರಾಗಿದ್ದ ಬಂಗಾರಪ್ಪ ಅವರ ಹೆಸರು ಅಜರಾಮರವಾಗಿಸಬೇಕು ಎಂದು ಕೋರಿದ್ದಾರೆ.</p>.<p>‘ಅ.26 ರಂದು ಬಂಗಾರಪ್ಪ ಅವರ 93ನೇ ಜನ್ಮದಿನ. ಈ ಸಂದರ್ಭದಲ್ಲಿ ರಾಜ್ಯದ ಒಂದು ಸರ್ಕಾರಿ ಯೋಜನೆಗೆ ಅವರ ಹೆಸರು ಇಟ್ಟರೆ ಅವರಿಗೆ ಹಾಗೂ ಆ ಮೂಲಕ ಇಡೀ ಹಿಂದುಳಿದ ಸಮುದಾಯಕ್ಕೆ ಗೌರವವನ್ನು ಸಲ್ಲಿಸಿದಂತಾಗುತ್ತಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p>ಬಂಗಾರಪ್ಪ ಅವರು ಜಾರಿಗೆ ತಂದಿದ್ದ ‘ಆಶ್ರಯ’, ‘ಆರಾಧನಾ’, ‘ವಿಶ್ವ’ ಯೋಜನೆಗಳ ಮೂಲಕ ಜನರು ಅವರನ್ನು ಸದಾ ಸ್ಮರಿಸುತ್ತಿದೆ. ಹಿಂದೆ ಆಡಳಿತ ನಡೆಸಿದ ಸರ್ಕಾರಗಳು ಬಂಗಾರಪ್ಪ ಅವರನ್ನು ನಿರ್ಲಕ್ಷಿಸಿವೆ’ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>