<p><strong>ಶಿವಮೊಗ್ಗ:</strong> ‘ನಿವೃತ್ತ ನ್ಯಾ. ನಾಗಮೋಹನ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಅವೈಜ್ಞಾನಿಕವಾಗಿದ್ದು, ಬಂಜಾರ (ಲಂಬಾಣಿ) ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಇದನ್ನು ಸರಿಪಡಿಸಬೇಕು’ ಎಂದು ಗೋರಸೇನಾ ಸಮಿತಿ ರಾಷ್ಟ್ರೀಯ ಸಂಘಟನೆಯ ಜಿಲ್ಲಾ ಘಟಕ ಅಧ್ಯಕ್ಷ ಚಂದ್ರು ಎಸ್. ನಾಯ್ಕ ಒತ್ತಾಯಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು</p>.<p>‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. 101 ಜಾತಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಬಂಜಾರ ಸೇರಿದಂತೆ ಹಲವು ಜಾತಿಗಳಿಗೆ ಇದರಿಂದ ಅನ್ಯಾಯವಾಗಿದೆ ಎಂದು ದೂರಿದರು. </p>.<p>‘ಬಿಜೆಪಿ ಅಧಿಕಾರವಧಿಯಲ್ಲಿ ಮಾಡಿದ ವರ್ಗೀಕರಣದಲ್ಲಿ 99 ಜಾತಿಗಳನ್ನು ಒಟ್ಟುಗೂಡಿಸಿ ಶೇ 4.5ರಷ್ಟು ಮೀಸಲಾತಿ ನೀಡಲಾಗಿತ್ತು. ಈಗ 63 ಜಾತಿಗಳನ್ನು ಒಗ್ಗೂಡಿಸಿ ಶೇ 5ರಷ್ಟು ಮೀಸಲಾತಿ ನೀಡಲಾಗಿದೆ. ಈ ಎರಡೂ ಮೀಸಲಾತಿಯ ವರ್ಗೀಕರಣವು ಅವೈಜ್ಞಾನಿಕವಾಗಿದೆ’ ಎಂದು ಆರೋಪಿಸಿದರು. </p>.<p>‘ಬಂಜಾರ ಸಮುದಾಯದ ಅಂಕಿ–ಅಂಶ ತಪ್ಪಾಗಿದೆ. 2011ರ ಜಾತಿ ಗಣತಿಯಲ್ಲಿ ಎಸ್ಸಿ ಜನಸಂಖ್ಯೆ 1.8 ಕೋಟಿ ಇತ್ತು. ಈಗಿನ ಜಾತಿಗಣತಿಯಲ್ಲಿ 1.5 ಕೋಟಿ ಆಗಿದೆ. ಇಲ್ಲಿ ಜನಸಂಖ್ಯೆ ಕಡಿಮೆ ಆಗಲು ಕಾರಣವೇನು? ಈ ಬಗ್ಗೆ ಸರಿಯಾದ ಕ್ರಮದಲ್ಲಿ ಸರ್ಕಾರ ಸಮೀಕ್ಷೆ ನಡೆಸಿ ವರದಿ ಜಾರಿಗೊಳಸಿಬೇಕು’ ಎಂದು ಬಂಜಾರ ಜಿಲ್ಲಾ ಸಮುದಾಯದ ಮಾಜಿ ಕಾರ್ಯದರ್ಶಿ ಕೆ. ಶಶಿಕುಮಾರ್ ಒತ್ತಾಯಿಸಿದರು. </p>.<p>ಸಂವಿಧಾನದಲ್ಲಿ ಸ್ಪೃಶ್ಯ ಮತ್ತು ಅಸ್ಪೃಶ್ಯ ಪದ ಬಳಕೆ ನಿಷೇಧಿಸಿದ್ದು, ಆಯೋಗದ ವರದಿಯಲ್ಲೂ ಇದೇ ಪದ ಬಳಕೆ ಮಾಡಿ ವರ್ಗಿಕರಣ ಮಾಡಿರುವುದು ಸರಿಯಲ್ಲ. ಸಮುದಾಯದವರು ಉದ್ಯೋಗ ಅರಿಸಿ ಗುಳೆ ಹೋಗಿರುವುದರಿಂದ ಸಮೀಕ್ಷೆಯಿಂದ ಹೊರಗಿದ್ದಾರೆ. ಈ ಬಗ್ಗೆಯೂ ಸೂಕ್ತ ರೀತಿಯಲ್ಲಿ ಸಮೀಕ್ಷೆ ನಡೆಸಬೇಕು ಎಂದು ಬಂಜಾರ ಜಿಲ್ಲಾ ಸಮಾಜದ ಮುಖಂಡ ರೇಣುಕ ನಾಯ್ಕ ಆಗ್ರಹಿಸಿದರು.</p>.<p>ಶಿಕಾರಿಪುರ ತಾಲ್ಲೂಕು ಘಟಕ ಅಧ್ಯಕ್ಷ ಎಸ್. ಮಂಜುನಾಯ್ಕ, ಪ್ರಮುಖರಾದ ರಾಜೇಶ್ ದುಮ್ಮನಹಳ್ಳಿ, ಹನುಮಂತ ನಾಯ್ಕ, ಸಂತೋಷ್, ಲಿಂಗರಾಜ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ನಿವೃತ್ತ ನ್ಯಾ. ನಾಗಮೋಹನ ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಅವೈಜ್ಞಾನಿಕವಾಗಿದ್ದು, ಬಂಜಾರ (ಲಂಬಾಣಿ) ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಇದನ್ನು ಸರಿಪಡಿಸಬೇಕು’ ಎಂದು ಗೋರಸೇನಾ ಸಮಿತಿ ರಾಷ್ಟ್ರೀಯ ಸಂಘಟನೆಯ ಜಿಲ್ಲಾ ಘಟಕ ಅಧ್ಯಕ್ಷ ಚಂದ್ರು ಎಸ್. ನಾಯ್ಕ ಒತ್ತಾಯಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು</p>.<p>‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. 101 ಜಾತಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಮೀಸಲಾತಿ ವರ್ಗೀಕರಣ ಮಾಡಲಾಗಿದೆ. ಬಂಜಾರ ಸೇರಿದಂತೆ ಹಲವು ಜಾತಿಗಳಿಗೆ ಇದರಿಂದ ಅನ್ಯಾಯವಾಗಿದೆ ಎಂದು ದೂರಿದರು. </p>.<p>‘ಬಿಜೆಪಿ ಅಧಿಕಾರವಧಿಯಲ್ಲಿ ಮಾಡಿದ ವರ್ಗೀಕರಣದಲ್ಲಿ 99 ಜಾತಿಗಳನ್ನು ಒಟ್ಟುಗೂಡಿಸಿ ಶೇ 4.5ರಷ್ಟು ಮೀಸಲಾತಿ ನೀಡಲಾಗಿತ್ತು. ಈಗ 63 ಜಾತಿಗಳನ್ನು ಒಗ್ಗೂಡಿಸಿ ಶೇ 5ರಷ್ಟು ಮೀಸಲಾತಿ ನೀಡಲಾಗಿದೆ. ಈ ಎರಡೂ ಮೀಸಲಾತಿಯ ವರ್ಗೀಕರಣವು ಅವೈಜ್ಞಾನಿಕವಾಗಿದೆ’ ಎಂದು ಆರೋಪಿಸಿದರು. </p>.<p>‘ಬಂಜಾರ ಸಮುದಾಯದ ಅಂಕಿ–ಅಂಶ ತಪ್ಪಾಗಿದೆ. 2011ರ ಜಾತಿ ಗಣತಿಯಲ್ಲಿ ಎಸ್ಸಿ ಜನಸಂಖ್ಯೆ 1.8 ಕೋಟಿ ಇತ್ತು. ಈಗಿನ ಜಾತಿಗಣತಿಯಲ್ಲಿ 1.5 ಕೋಟಿ ಆಗಿದೆ. ಇಲ್ಲಿ ಜನಸಂಖ್ಯೆ ಕಡಿಮೆ ಆಗಲು ಕಾರಣವೇನು? ಈ ಬಗ್ಗೆ ಸರಿಯಾದ ಕ್ರಮದಲ್ಲಿ ಸರ್ಕಾರ ಸಮೀಕ್ಷೆ ನಡೆಸಿ ವರದಿ ಜಾರಿಗೊಳಸಿಬೇಕು’ ಎಂದು ಬಂಜಾರ ಜಿಲ್ಲಾ ಸಮುದಾಯದ ಮಾಜಿ ಕಾರ್ಯದರ್ಶಿ ಕೆ. ಶಶಿಕುಮಾರ್ ಒತ್ತಾಯಿಸಿದರು. </p>.<p>ಸಂವಿಧಾನದಲ್ಲಿ ಸ್ಪೃಶ್ಯ ಮತ್ತು ಅಸ್ಪೃಶ್ಯ ಪದ ಬಳಕೆ ನಿಷೇಧಿಸಿದ್ದು, ಆಯೋಗದ ವರದಿಯಲ್ಲೂ ಇದೇ ಪದ ಬಳಕೆ ಮಾಡಿ ವರ್ಗಿಕರಣ ಮಾಡಿರುವುದು ಸರಿಯಲ್ಲ. ಸಮುದಾಯದವರು ಉದ್ಯೋಗ ಅರಿಸಿ ಗುಳೆ ಹೋಗಿರುವುದರಿಂದ ಸಮೀಕ್ಷೆಯಿಂದ ಹೊರಗಿದ್ದಾರೆ. ಈ ಬಗ್ಗೆಯೂ ಸೂಕ್ತ ರೀತಿಯಲ್ಲಿ ಸಮೀಕ್ಷೆ ನಡೆಸಬೇಕು ಎಂದು ಬಂಜಾರ ಜಿಲ್ಲಾ ಸಮಾಜದ ಮುಖಂಡ ರೇಣುಕ ನಾಯ್ಕ ಆಗ್ರಹಿಸಿದರು.</p>.<p>ಶಿಕಾರಿಪುರ ತಾಲ್ಲೂಕು ಘಟಕ ಅಧ್ಯಕ್ಷ ಎಸ್. ಮಂಜುನಾಯ್ಕ, ಪ್ರಮುಖರಾದ ರಾಜೇಶ್ ದುಮ್ಮನಹಳ್ಳಿ, ಹನುಮಂತ ನಾಯ್ಕ, ಸಂತೋಷ್, ಲಿಂಗರಾಜ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>