'ತಪ್ಪು ತಿಳಿವಳಿಕೆಯಿಂದ ಬಂಜಾರ ಸಮುದಾಯದವರು ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಯಾರನ್ನೂ ಬಂಧಿಸಬೇಡಿ ಎಂದು ಮಾಧ್ಯಮಗಳಲ್ಲಿ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ಇಲ್ಲಿ ಸಮುದಾಯದವರನ್ನು ದೊಡ್ಡ ಸಂಖ್ಯೆಯಲ್ಲಿ ವಿಚಾರಣೆ ನೆಪದಲ್ಲಿ ಕರೆದೊಯ್ದು ಬಂಧಿಸಲಾಗಿದೆ. ಪೊಲೀಸರು ಕೂಡ ಈ ಬಗ್ಗೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಿದವರನ್ನು ಬಂಧಿಸುವ ಮೂಲಕ ಪೊಲೀಸರು ನಮ್ಮ ಮೂಲಭೂತ ಹಕ್ಕನ್ನು ಕಸಿದುಕೊಂಡಿದ್ದಾರೆ' ಎಂದು ಪ್ರತಿಭಟನಾಕಾರರು ದೂರಿದರು.