‘ನಮ್ಮ ಸಮಾಜ ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದಿದೆ. ಸಾಮಾಜಿಕ, ಆರ್ಥಿಕ ಕ್ಷೇತ್ರಗಳಲ್ಲೂ ಅತ್ಯಂತ ಕೆಳಮಟ್ಟದಲ್ಲಿದ್ದು, ಎಲ್ಲ ವಿಚಾರಗಳ ಮಾಹಿತಿಯೂ ಸರ್ಕಾರಕ್ಕಿದೆ. ಎಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿದ್ದು, ಅವರು ಕೂಡ ಹೋರಾಟ ನಡೆಯುವ ಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರು
ಕೂಡ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ’ ಎಂದು ಅಭಿಯಾನದ ಪ್ರಮುಖರಾದ ಮಲ್ಲಿಕಾರ್ಜುನ ಹಕ್ರೆ ಹೇಳಿದರು.