<p><strong>ಪ್ರಜಾವಾಣಿ ವಾರ್ತೆ</strong></p>.<p><strong>ಸಾಗರ: ದೇವಸ್ಥಾನದ ಅಭಿವೃದ್ಧಿ ಜೊತೆಗೆ ದೇವಸ್ಥಾನದಿಂದ ಬರುವ ಆದಾಯದ ಮೂಲಕ ಊರಿನ ಹಿತ ಕಾಯಲು ಮುಂದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</strong></p>.<p><strong>ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ಮಾರಿಕಾಂಬಾ ನ್ಯಾಸ ಪ್ರತಿಷ್ಠಾನದ ಚುನಾವಣೆಯಲ್ಲಿ ಜಯಶಾಲಿಯಾದ 36 ನಿರ್ದೇಶಕರನ್ನು ಅಭಿನಂದಿಸಿ ಅವರು ಮಾತನಾಡಿದರು.</strong></p>.<p><strong>ದೇವಸ್ಥಾನದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಕಲ್ಯಾಣ ಮಂಟಪ ಹಾಗೂ ಶಿಕ್ಷಣ ಸಂಸ್ಥೆಯ ಆರಂಭಕ್ಕೆ ನೂತನ ಸಮಿತಿ ಅಗತ್ಯ ಕ್ರಮ ಕೈಗೊಳ್ಳಬೇಕು. ದೇವಸ್ಥಾನದ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯಬೇಕು ಎಂದು ಅವರು ಹೇಳಿದರು.</strong></p>.<p><strong>ಕಳೆದ ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ನನ್ನ ಪರವಾಗಿ ಅಳವಡಿಸಲಾದ ಫ್ಲೆಕ್ಸ್ ಗಳಿಗೆ ದೇವಸ್ಥಾನದ ಸಮಿತಿ ವತಿಯಿಂದ ಹಣ ಪಡೆಯಲಾಗಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ದೇವಸ್ಥಾನದ ವತಿಯಿಂದ ಈ ಸಂಬಂಧ ಯಾವುದೆ ಹಣ ಪಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಜಾವಾಣಿ ವಾರ್ತೆ</strong></p>.<p><strong>ಸಾಗರ: ದೇವಸ್ಥಾನದ ಅಭಿವೃದ್ಧಿ ಜೊತೆಗೆ ದೇವಸ್ಥಾನದಿಂದ ಬರುವ ಆದಾಯದ ಮೂಲಕ ಊರಿನ ಹಿತ ಕಾಯಲು ಮುಂದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</strong></p>.<p><strong>ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ಮಾರಿಕಾಂಬಾ ನ್ಯಾಸ ಪ್ರತಿಷ್ಠಾನದ ಚುನಾವಣೆಯಲ್ಲಿ ಜಯಶಾಲಿಯಾದ 36 ನಿರ್ದೇಶಕರನ್ನು ಅಭಿನಂದಿಸಿ ಅವರು ಮಾತನಾಡಿದರು.</strong></p>.<p><strong>ದೇವಸ್ಥಾನದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಕಲ್ಯಾಣ ಮಂಟಪ ಹಾಗೂ ಶಿಕ್ಷಣ ಸಂಸ್ಥೆಯ ಆರಂಭಕ್ಕೆ ನೂತನ ಸಮಿತಿ ಅಗತ್ಯ ಕ್ರಮ ಕೈಗೊಳ್ಳಬೇಕು. ದೇವಸ್ಥಾನದ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯಬೇಕು ಎಂದು ಅವರು ಹೇಳಿದರು.</strong></p>.<p><strong>ಕಳೆದ ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ನನ್ನ ಪರವಾಗಿ ಅಳವಡಿಸಲಾದ ಫ್ಲೆಕ್ಸ್ ಗಳಿಗೆ ದೇವಸ್ಥಾನದ ಸಮಿತಿ ವತಿಯಿಂದ ಹಣ ಪಡೆಯಲಾಗಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ದೇವಸ್ಥಾನದ ವತಿಯಿಂದ ಈ ಸಂಬಂಧ ಯಾವುದೆ ಹಣ ಪಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>