<p><strong>ರಿಪ್ಪನ್ಪೇಟೆ</strong>: ‘ಶರಾವತಿ ಮುಳುಗಡೆ ಸಂತ್ರಸ್ತರು ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿ ಕೊಂಡಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಸರ್ಕಾರ ತೆರವು ಗೊಳಿಸುವುದಿಲ್ಲ’ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು.</p>.<p>ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಜೆಜೆಎಂ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ<br> ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ಭಾಗದ ಭೂ ಹಕ್ಕು ಜ್ವಲಂತ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಹೊಸದಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿದಲ್ಲಿ ಕಠಿಣ ಕಾನೂನು ಶಿಕ್ಷೆಗೆ ಒಳಪಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕವಾಗಿ ಸದೃಢಗೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಆಸರೆಯಾಗಿವೆ ಎಂದರು.</p>.<p>ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು, ಪಿಡಿಒ ಸ್ಥಳೀಯ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ</strong>: ‘ಶರಾವತಿ ಮುಳುಗಡೆ ಸಂತ್ರಸ್ತರು ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿ ಕೊಂಡಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಸರ್ಕಾರ ತೆರವು ಗೊಳಿಸುವುದಿಲ್ಲ’ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು.</p>.<p>ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಜೆಜೆಎಂ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ<br> ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ಭಾಗದ ಭೂ ಹಕ್ಕು ಜ್ವಲಂತ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು. ಹೊಸದಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿದಲ್ಲಿ ಕಠಿಣ ಕಾನೂನು ಶಿಕ್ಷೆಗೆ ಒಳಪಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಆರ್ಥಿಕವಾಗಿ ಸದೃಢಗೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಆಸರೆಯಾಗಿವೆ ಎಂದರು.</p>.<p>ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು, ಪಿಡಿಒ ಸ್ಥಳೀಯ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>