<p><strong>ಸಾಗರ</strong>: ‘ತುರ್ತು ಸಂದರ್ಭದಲ್ಲಿ ರಕ್ತದ ಕೊರತೆಯನ್ನು ನೀಗಿಸುವ ಮಹತ್ವದ ಕಾರ್ಯವನ್ನು ರೋಟರಿ ರಕ್ತನಿಧಿ ಕೇಂದ್ರ ನಿರ್ವಹಿಸಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಗುರುವಾರ ನಡೆದ ರೋಟರಿ ರಕ್ತನಿಧಿ ಕೇಂದ್ರದ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೇಂದ್ರದ ಸಾಧನೆಗಳ ಕುರಿತು ಪ್ರಕಟಗೊಂಡಿರುವ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಇಲ್ಲಿ ರಕ್ತನಿಧಿ ಕೇಂದ್ರ ಆರಂಭಗೊಳ್ಳುವ ಮುನ್ನ ರಕ್ತದ ತುರ್ತು ಅಗತ್ಯವಿರುವ ರೋಗಿಗಳಿಗೆ ಶಿವಮೊಗ್ಗದಿಂದ ತರಿಸಬೇಕಿತ್ತು. ಇದರಿಂದಾಗಿ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ರೋಟರಿ ಸಂಸ್ಥೆ ಇಲ್ಲಿಯೇ ರಕ್ತನಿಧಿ ಕೇಂದ್ರ ಸ್ಥಾಪಿಸುವ ಸಾಹಸಕ್ಕೆ ಮುಂದಾಗಿದ್ದು ಶ್ಲಾಘನೀಯ’ ಎಂದರು.</p>.<p>‘ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡಿದಾಗ ಮಾತ್ರ ರಕ್ತನಿಧಿ ಕೇಂದ್ರ ಸದೃಢವಾಗಿರಲು ಸಾಧ್ಯ. ಜನ್ಮದಿನ, ಮದುವೆ, ಗಣ್ಯರ ಜನ್ಮದಿನ ಹೀಗೆ ಹಲವು ಆಚರಣೆಗಳ ವೇಳೆ ರಕ್ತದಾನ ಶಿಬಿರ ಆಯೋಜಿಸುವುದು ಸೂಕ್ತ’ ಎಂದು ರೋಟರಿ ಸಂಸ್ಥೆ ಅಧ್ಯಕ್ಷೆ ಡಾ.ರಾಜನಂದಿನಿ ಕಾಗೋಡು ಹೇಳಿದರು.</p>.<p>ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಮುಖರಾದ ಎಚ್.ಎಂ.ಶಿವಕುಮಾರ್, ಕೆ.ಎನ್.ಶ್ರೀಧರ್, ಬಿ.ಜಿ.ಸಂಗಮ್, ಶಾಂತಕುಮಾರ್ ಇದ್ದರು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ‘ತುರ್ತು ಸಂದರ್ಭದಲ್ಲಿ ರಕ್ತದ ಕೊರತೆಯನ್ನು ನೀಗಿಸುವ ಮಹತ್ವದ ಕಾರ್ಯವನ್ನು ರೋಟರಿ ರಕ್ತನಿಧಿ ಕೇಂದ್ರ ನಿರ್ವಹಿಸಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಗುರುವಾರ ನಡೆದ ರೋಟರಿ ರಕ್ತನಿಧಿ ಕೇಂದ್ರದ 5ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೇಂದ್ರದ ಸಾಧನೆಗಳ ಕುರಿತು ಪ್ರಕಟಗೊಂಡಿರುವ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಇಲ್ಲಿ ರಕ್ತನಿಧಿ ಕೇಂದ್ರ ಆರಂಭಗೊಳ್ಳುವ ಮುನ್ನ ರಕ್ತದ ತುರ್ತು ಅಗತ್ಯವಿರುವ ರೋಗಿಗಳಿಗೆ ಶಿವಮೊಗ್ಗದಿಂದ ತರಿಸಬೇಕಿತ್ತು. ಇದರಿಂದಾಗಿ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ರೋಟರಿ ಸಂಸ್ಥೆ ಇಲ್ಲಿಯೇ ರಕ್ತನಿಧಿ ಕೇಂದ್ರ ಸ್ಥಾಪಿಸುವ ಸಾಹಸಕ್ಕೆ ಮುಂದಾಗಿದ್ದು ಶ್ಲಾಘನೀಯ’ ಎಂದರು.</p>.<p>‘ಸಾರ್ವಜನಿಕರು ನಿಯಮಿತವಾಗಿ ರಕ್ತದಾನ ಮಾಡಿದಾಗ ಮಾತ್ರ ರಕ್ತನಿಧಿ ಕೇಂದ್ರ ಸದೃಢವಾಗಿರಲು ಸಾಧ್ಯ. ಜನ್ಮದಿನ, ಮದುವೆ, ಗಣ್ಯರ ಜನ್ಮದಿನ ಹೀಗೆ ಹಲವು ಆಚರಣೆಗಳ ವೇಳೆ ರಕ್ತದಾನ ಶಿಬಿರ ಆಯೋಜಿಸುವುದು ಸೂಕ್ತ’ ಎಂದು ರೋಟರಿ ಸಂಸ್ಥೆ ಅಧ್ಯಕ್ಷೆ ಡಾ.ರಾಜನಂದಿನಿ ಕಾಗೋಡು ಹೇಳಿದರು.</p>.<p>ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಪ್ರಮುಖರಾದ ಎಚ್.ಎಂ.ಶಿವಕುಮಾರ್, ಕೆ.ಎನ್.ಶ್ರೀಧರ್, ಬಿ.ಜಿ.ಸಂಗಮ್, ಶಾಂತಕುಮಾರ್ ಇದ್ದರು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>