ಶಿವಮೊಗ್ಗ: ‘ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರನ್ನು ಕಾಂಗ್ರೆಸ್ಗೆ ಕರೆತರುವ ಕುರಿತು ಮಾತುಕತೆ ನಡೆದಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪನವರು ಪಕ್ಷ ಬಿಡದಂತೆ ಕುಮಾರ್ ಬಂಗಾರಪ್ಪ ಅವರನ್ನು ಕಟ್ಟಿ ಹಾಕಿಕೊಂಡಿದ್ದಾರೆ. ನಾವು ಹಗ್ಗ ಬಿಚ್ಚಲು ಹೋಗಿದ್ದೆವು. ಅದು ಕಟ್ ಆಗುತ್ತಿದೆ’ ಎಂದು ಶನಿವಾರ ಮಾರ್ಮಿಕವಾಗಿ ನುಡಿದರು.
‘ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯುವ ಸಾಧ್ಯತೆ ಇದೆ’ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.