‘ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ ಜಿಲ್ಲೆಗಳ ಜನರ ಜೀವನಾಡಿ. ಕುಡಿಯುವ ನೀರು, ಕೈಗಾರಿಕೆ ಮತ್ತು ನೀರಾವರಿಗೆ ಇರುವ ಪ್ರಮುಖ ಜಲಾಶಯ. ಈ ಜಲಾಶಯದ ದುರಸ್ತಿ ಕಾರ್ಯ 2016ರಲ್ಲಿ ಆರಂಭವಾಗಿ 2018ರಲ್ಲಿ ಪೂರ್ಣ
ಗೊಂಡಿದೆ. ಕಾಮಗಾರಿ ಮುಗಿದ ನಂತರ ನೀರು ಬಿಟ್ಟಾಗ ಇಡೀ ಕಾಮಗಾರಿ ನೀರಿನಲ್ಲಿ ಕೊಚ್ಚಿಹೋಗಿದೆ. ₹ 7 ಕೋಟಿ ಹಣ ಜಲಾಶಯದ ತಳದಲ್ಲಿಯೇ ಮುಚ್ಚಿಹೋಗಿದೆ. ಕಾಮಗಾರಿಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.