ರಾಜ್ಯದ ಕೊಡಗು ಜಿಲ್ಲೆಯಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ₹ 4ಸಾವಿರ ಕೋಟಿ ಆರ್ಥಿಕ ನಷ್ಟ ಸಂಭವಿಸಿದೆ. ಈ ಪ್ರದೇಶದ ಸಂತ್ರಸ್ಥರ ನೆರವಿಗೆ ಅಗತ್ಯವಿರುವ ಎಲ್ಲಾ ರೀತಿಯ ಪರಿಹಾರ ಕಾರ್ಯ ಕೈಗೊಂಡಿದ್ದೇವೆ. ರಾಷ್ಟ್ರೀಯ ವಿಪತ್ತು ನೀತಿ-ನಿಯಮ ಸಡಿಲಿಸಿ, ವಿಶೇಷ ಪ್ರಕರಣವಾಗಿ ಪರಿಗಣಿಸಿ ಹೆಚ್ಚಿನ ಪರಿಹಾರ ನೀಡಿ, ಕೊಡಗಿನ ಪುನರ್ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.