<p><strong>ಭದ್ರಾವತಿ</strong>: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ರೈತರು ಭದ್ರಾ ನದಿಗೆ ಭಾನುವಾರ ಬಾಗೀನ ಅರ್ಪಿಸಿದರು. </p>.<p>ನಂತರ ಮಾತನಾಡಿದ ಎಚ್.ಆರ್. ಬಸವರಾಜಪ್ಪ, ಉತ್ತಮ ಮಳೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ದೂರವಾಗಿದೆ. ಈ ವರ್ಷವೂ ಬೇಸಿಗೆ ಬೆಳೆ ಬೆಳೆಯಲು ರೈತರು ಆತಂಕ ಪಡುವ ಅಗತ್ಯವಿಲ್ಲ. ನೀರನ್ನು ಸದ್ಬಳಕೆ ಮಾಡಿಕೊಂಡು ಅಚ್ಚುಕಟ್ಟು ಭಾಗದ ಕೊನೆ ಭಾಗದ ರೈತರಿಗೂ ನೆರವಾಗಬೇಕು ಎಂದರು. </p>.<p>ಭದ್ರಾ ಅಚ್ಚಕಟ್ಟು ವ್ಯಾಪ್ತಿಯ ನಾಲಾ, ಗೇಟುಗಳ ದುರಸ್ತಿ ಮಾಡದೇ ನೀರು ವ್ಯರ್ಥವಾಗಿ ಹರಿಯುತ್ತಿದೆ. ಈ ನೀರನ್ನು ತಡೆಯಲು ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಬೇಕು ಎಂದರು. </p>.<p>ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಹಿಟ್ಟೂರು ರಾಜು, ಪ್ರಮುಖರಾದ ಟಿ.ಎಂ ಚಂದ್ರಪ್ಪ, ಮುನಿಯಪ್ಪ, ಚಿಕ್ಕಬ್ಬಿಗೆರೆ ನಾಗರಾಜ್, ಭಾಗ್ಯಾ ರಾಘವೇಂದ್ರ, ಮರುಳಸಿದ್ದಯ್ಯ, ಮಲ್ಲಿಕಾರ್ಜುನ, ಕುಮಾರಯ್ಯ, ಪುಷ್ಪಾ, ಕೆ. ರಾಘವೇಂದ್ರ, ಹುಲಿಮಟ್ಟಿ ಜಯಣ್ಣ, ಪಿ.ಶೇಖರಪ್ಪ, ಎಂ.ಡಿ ನಾಗರಾಜ್,<br />ಜಿ.ಎನ್. ಪಂಚಾಕ್ಷರಿ, ಉಪಾಧ್ಯಕ್ಷ ಬಿ.ಆರ್.ಪಿ ಹಾಲಪ್ಪ, ರಾಜಶೇಖರ್, ಅಕ್ಕಿ ರಾಜು, ಮೂರ್ತಿ, ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ರೈತರು ಭದ್ರಾ ನದಿಗೆ ಭಾನುವಾರ ಬಾಗೀನ ಅರ್ಪಿಸಿದರು. </p>.<p>ನಂತರ ಮಾತನಾಡಿದ ಎಚ್.ಆರ್. ಬಸವರಾಜಪ್ಪ, ಉತ್ತಮ ಮಳೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ದೂರವಾಗಿದೆ. ಈ ವರ್ಷವೂ ಬೇಸಿಗೆ ಬೆಳೆ ಬೆಳೆಯಲು ರೈತರು ಆತಂಕ ಪಡುವ ಅಗತ್ಯವಿಲ್ಲ. ನೀರನ್ನು ಸದ್ಬಳಕೆ ಮಾಡಿಕೊಂಡು ಅಚ್ಚುಕಟ್ಟು ಭಾಗದ ಕೊನೆ ಭಾಗದ ರೈತರಿಗೂ ನೆರವಾಗಬೇಕು ಎಂದರು. </p>.<p>ಭದ್ರಾ ಅಚ್ಚಕಟ್ಟು ವ್ಯಾಪ್ತಿಯ ನಾಲಾ, ಗೇಟುಗಳ ದುರಸ್ತಿ ಮಾಡದೇ ನೀರು ವ್ಯರ್ಥವಾಗಿ ಹರಿಯುತ್ತಿದೆ. ಈ ನೀರನ್ನು ತಡೆಯಲು ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಬೇಕು ಎಂದರು. </p>.<p>ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಹಿಟ್ಟೂರು ರಾಜು, ಪ್ರಮುಖರಾದ ಟಿ.ಎಂ ಚಂದ್ರಪ್ಪ, ಮುನಿಯಪ್ಪ, ಚಿಕ್ಕಬ್ಬಿಗೆರೆ ನಾಗರಾಜ್, ಭಾಗ್ಯಾ ರಾಘವೇಂದ್ರ, ಮರುಳಸಿದ್ದಯ್ಯ, ಮಲ್ಲಿಕಾರ್ಜುನ, ಕುಮಾರಯ್ಯ, ಪುಷ್ಪಾ, ಕೆ. ರಾಘವೇಂದ್ರ, ಹುಲಿಮಟ್ಟಿ ಜಯಣ್ಣ, ಪಿ.ಶೇಖರಪ್ಪ, ಎಂ.ಡಿ ನಾಗರಾಜ್,<br />ಜಿ.ಎನ್. ಪಂಚಾಕ್ಷರಿ, ಉಪಾಧ್ಯಕ್ಷ ಬಿ.ಆರ್.ಪಿ ಹಾಲಪ್ಪ, ರಾಜಶೇಖರ್, ಅಕ್ಕಿ ರಾಜು, ಮೂರ್ತಿ, ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>