<p>ಭದ್ರಾವತಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧ ಶುಕ್ರವಾರ ಅಂಜುಮನ್ ಇಸ್ಲಾಂ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.</p>.<p>ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದು ಅಸಾಂವಿಧಾನಿಕ ನಡೆ. ಇದನ್ನು ಮರು ಪರಿಶೀಲಿಸಬೇಕು ಎಂದು ಸಂಘಟನೆಯ ಅಧ್ಯಕ್ಷ ಮುರ್ತುಜಾ ಖಾನ್ ಒತ್ತಾಯಿಸಿದರು.</p>.<p>ನಗರಸಭಾ ಸದಸ್ಯ ಬಿ.ಕೆ ಮೋಹನ್ ಮತನಾಡಿದರು. ಪ್ರತಿಭಟನೆಯಲ್ಲಿ ಮುಸಾಫೀರ್ ಭಾಷಾ, ಎ.ಬಿ.ಟಿ ಬಾಬು, ಅಮೀರ್ ಜಾನ್, ಬಾಬಾ ಜಾನ್, ಮಹಮ್ಮದ್ ಸನಾವುಲ್ಲಾ, ರಾಜೇಂದ್ರ, ಬಿ.ಕೆ ಜಗನ್ನಾಥ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<p>ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ರಂಗಪ್ಪ ವೃತ್ತದಲ್ಲಿ ತಹಶೀಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾಕಾರರು ತೋಳುಗಳಿಗೆ ಕಪ್ಪುಪಟ್ಟಿ ಕಟ್ಟಿ, ವಕ್ಫ್ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಅಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧ ಶುಕ್ರವಾರ ಅಂಜುಮನ್ ಇಸ್ಲಾಂ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.</p>.<p>ಕೇಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದು ಅಸಾಂವಿಧಾನಿಕ ನಡೆ. ಇದನ್ನು ಮರು ಪರಿಶೀಲಿಸಬೇಕು ಎಂದು ಸಂಘಟನೆಯ ಅಧ್ಯಕ್ಷ ಮುರ್ತುಜಾ ಖಾನ್ ಒತ್ತಾಯಿಸಿದರು.</p>.<p>ನಗರಸಭಾ ಸದಸ್ಯ ಬಿ.ಕೆ ಮೋಹನ್ ಮತನಾಡಿದರು. ಪ್ರತಿಭಟನೆಯಲ್ಲಿ ಮುಸಾಫೀರ್ ಭಾಷಾ, ಎ.ಬಿ.ಟಿ ಬಾಬು, ಅಮೀರ್ ಜಾನ್, ಬಾಬಾ ಜಾನ್, ಮಹಮ್ಮದ್ ಸನಾವುಲ್ಲಾ, ರಾಜೇಂದ್ರ, ಬಿ.ಕೆ ಜಗನ್ನಾಥ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.</p>.<p>ಮಾಧವಚಾರ್ ವೃತ್ತದಿಂದ ರಂಗಪ್ಪ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ರಂಗಪ್ಪ ವೃತ್ತದಲ್ಲಿ ತಹಶೀಲ್ದಾರ್ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನಾಕಾರರು ತೋಳುಗಳಿಗೆ ಕಪ್ಪುಪಟ್ಟಿ ಕಟ್ಟಿ, ವಕ್ಫ್ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಅಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>