<p>ಭದ್ರಾವತಿ: ತನ್ನದೇ ಆದ ಸಾಂಸ್ಕೃತಿಕ ಅನನ್ಯತೆ ಹೊಂದಿರುವ ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಬಗ್ಗೆ ಹೆಚ್ಚಿನ ಸಂಶೋಧನೆಗಳು ಆಗಬೇಕು ಎಂದು ಸಂಶೋಧಕ ಆರ್. ಮಧುಸೂದನ್ ಆಗ್ರಹಿಸಿದರು.</p>.<p>ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜದ ವತಿಯಿಂದ ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಐತಿಹಾಸಿಕ ಗ್ರಂಥಗಳು ಹಾಗೂ ದೇಶದ ವಿವಿಧೆಡೆ ದೊರಕಿರುವ 30 ಶಾಸನಗಳಲ್ಲಿ ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಬಗ್ಗೆ ಉಲ್ಲೇಖವಿದೆ. ದೇಶಪ್ರೇಮ, ಪರಾಕ್ರಮಕ್ಕೆ ಹೆಸರುವಾಸಿಯಾದ ಈ ಸಮಾಜದ ಸಾಂಸ್ಕೃತಿಕ ಆಚರಣೆಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಅವಶ್ಯಕತೆಯಿದೆ ಎಂದರು.</p>.<p>ಸಮುದಾಯವು ದೇಶದ ಹಲವು ಭಾಷಾವಾರು ಪ್ರಾಂತ್ಯಗಳಲ್ಲಿ ಬೇರೆ ಹೆಸರುಗಳಲ್ಲಿ ಹರಿದು ಹಂಚಿ ಹೋಗಿದ್ದು, ಅವುಗಳನ್ನು ಒಗ್ಗೂಡಿಸಬೇಕಾಗಿದೆ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್ಗಳಲ್ಲಿ ಸಮುದಾಯದ ಯುವಕರ ದಾಖಲಾತಿ ಪ್ರಮಾಣ ಹೆಚ್ಚು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.</p>.<p>ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ಅಧ್ಯಕ್ಷ ಬಿ.ಕೆ. ಶಿವಕುಮಾರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್. ರಾಜು, ಉಪತಹಶೀಲ್ದಾರ್ ಮಂಜಾನಾಯ್ಕ, ಪದಾಧಿಕಾರಿಗಳಾದ ಗಂಗಾ ರೇವಣ್ಣ, ಜಯರಾಮ್, ಕೆ. ಮಾದಯ್ಯ, ಲಕ್ಷ್ಮಮ್ಮ, ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-42-1678046951</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ತನ್ನದೇ ಆದ ಸಾಂಸ್ಕೃತಿಕ ಅನನ್ಯತೆ ಹೊಂದಿರುವ ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಬಗ್ಗೆ ಹೆಚ್ಚಿನ ಸಂಶೋಧನೆಗಳು ಆಗಬೇಕು ಎಂದು ಸಂಶೋಧಕ ಆರ್. ಮಧುಸೂದನ್ ಆಗ್ರಹಿಸಿದರು.</p>.<p>ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಅಗ್ನಿವಂಶ ಕ್ಷತ್ರಿಯ ತಿಗಳ ಸಮಾಜದ ವತಿಯಿಂದ ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಐತಿಹಾಸಿಕ ಗ್ರಂಥಗಳು ಹಾಗೂ ದೇಶದ ವಿವಿಧೆಡೆ ದೊರಕಿರುವ 30 ಶಾಸನಗಳಲ್ಲಿ ಅಗ್ನಿವಂಶ ಕ್ಷತ್ರಿಯ ತಿಗಳ ಸಮುದಾಯದ ಬಗ್ಗೆ ಉಲ್ಲೇಖವಿದೆ. ದೇಶಪ್ರೇಮ, ಪರಾಕ್ರಮಕ್ಕೆ ಹೆಸರುವಾಸಿಯಾದ ಈ ಸಮಾಜದ ಸಾಂಸ್ಕೃತಿಕ ಆಚರಣೆಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಅವಶ್ಯಕತೆಯಿದೆ ಎಂದರು.</p>.<p>ಸಮುದಾಯವು ದೇಶದ ಹಲವು ಭಾಷಾವಾರು ಪ್ರಾಂತ್ಯಗಳಲ್ಲಿ ಬೇರೆ ಹೆಸರುಗಳಲ್ಲಿ ಹರಿದು ಹಂಚಿ ಹೋಗಿದ್ದು, ಅವುಗಳನ್ನು ಒಗ್ಗೂಡಿಸಬೇಕಾಗಿದೆ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್ಗಳಲ್ಲಿ ಸಮುದಾಯದ ಯುವಕರ ದಾಖಲಾತಿ ಪ್ರಮಾಣ ಹೆಚ್ಚು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.</p>.<p>ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್(ಪಿಎಲ್ಡಿ) ಅಧ್ಯಕ್ಷ ಬಿ.ಕೆ. ಶಿವಕುಮಾರ್, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್. ರಾಜು, ಉಪತಹಶೀಲ್ದಾರ್ ಮಂಜಾನಾಯ್ಕ, ಪದಾಧಿಕಾರಿಗಳಾದ ಗಂಗಾ ರೇವಣ್ಣ, ಜಯರಾಮ್, ಕೆ. ಮಾದಯ್ಯ, ಲಕ್ಷ್ಮಮ್ಮ, ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-42-1678046951</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>