<p>ಭದ್ರಾವತಿ: ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಭಾನುವಾರ ನಗರದ ಮುಖ್ಯಬೀದಿಗಳಲ್ಲಿ ಮಾತೆಯ ಅಲಂಕೃತ ತೇರಿನ ಮೆರವಣಿಗೆ ನಡೆಯಿತು.</p>.<p>ಬೆಂಗಳೂರಿನ ಪ್ರಾಂತೀಯ ಆರಾಧನ ವಿಧಿ ಆಯೋಗ ಹಾಗೂ ಅಂತರ್ಧರ್ಮಿಯ ಸಂವಾದ ಕಾರ್ಯದರ್ಶಿಗಳಾದ ಫಾದರ್ ವಿನಯ್ ಕುಮಾರ್ ರವರಿಂದ ಪೂಜಾ ವಿಧಿ–ವಿಧಾನಗಳು ನೆರವೇರಿದವು.</p>.<p>ಶಾಸಕರಾದ ಬಿ.ಕೆ ಸಂಗಮೇಶ್ವರ್ ರವರಿಂದ ತೇರಿನ ಮೆರವಣಿಗೆಗೆ ಚಾಲನೆ ನೀಡಲಾಯಿತು.</p>.<p>ಹಳೇ ನಗರ, ಕಾಗದನಗರ, ಕಾರೇಹಳ್ಳಿ, ಮಾವಿನಕೆರೆ ಮತ್ತು ಇತರೆ ಸುತ್ತಮುತ್ತಲ ಧರ್ಮ ಕೇಂದ್ರಗಳಿಂದ ಭಕ್ತರು ಆಗಮಿಸಿದ್ದರು. ಬ್ಯಾಂಡ್ ಸೆಟ್ ಮೂಲಕ ಮೆರವಣಿಗೆ ಪ್ರಾರಂಭಿಸಿದ ಭಕ್ತರು ಕೈಯಲ್ಲಿ ಮೊಂಭತ್ತಿಗಳನ್ನು ಹಿಡಿದು, ಪ್ರಾರ್ಥಿಸುತ್ತಾ ಸಾಲಾಗಿ ಮುನ್ನಡೆದರು.</p>.<p>ಭಕ್ತರಿಗೆ ಅಲ್ಲಲ್ಲಿ ಸಿಹಿ ಹಂಚಿ, ಪಟಾಕಿಗಳನ್ನು ಸಿಡಿಸಲಾಯಿತು. ಮೆರವಣಿಗೆ ನಂತರ ಈ ಬಾರಿ ವಿಶೇಷವಾದ ವಿದ್ಯುತ್ ದೀಪಾಲಂಕಾರ, ಪಟಾಕಿ ಮತ್ತು ಸಂಗೀತದೊಂದಿಗೆ ಮಾತೆಯ ತೇರನ್ನು ಮರಳಿ ದೇವಾಲಯದೊಳಗೆ ಬರಮಾಡಿಕೊಳ್ಳಲಾಯಿತು. ನಂತರ ಅನ್ನ ಸಂತರ್ಪಣೆ ನಡೆಯಿತು.</p>.<p>ಧರ್ಮ ಕೇಂದ್ರದ ಗುರುಗಳಾದ ಫಾದರ್ ಲ್ಯಾನ್ಸಿ ಡಿಸೋಜ, ಧರ್ಮಭಗೀನಿಯರು, ಪಂಚ ಯೋಜನೆಗಳ ಗ್ಯಾರಂಟಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದ ವಾರ್ಷಿಕ ಮಹೋತ್ಸವದ ಅಂಗವಾಗಿ ಭಾನುವಾರ ನಗರದ ಮುಖ್ಯಬೀದಿಗಳಲ್ಲಿ ಮಾತೆಯ ಅಲಂಕೃತ ತೇರಿನ ಮೆರವಣಿಗೆ ನಡೆಯಿತು.</p>.<p>ಬೆಂಗಳೂರಿನ ಪ್ರಾಂತೀಯ ಆರಾಧನ ವಿಧಿ ಆಯೋಗ ಹಾಗೂ ಅಂತರ್ಧರ್ಮಿಯ ಸಂವಾದ ಕಾರ್ಯದರ್ಶಿಗಳಾದ ಫಾದರ್ ವಿನಯ್ ಕುಮಾರ್ ರವರಿಂದ ಪೂಜಾ ವಿಧಿ–ವಿಧಾನಗಳು ನೆರವೇರಿದವು.</p>.<p>ಶಾಸಕರಾದ ಬಿ.ಕೆ ಸಂಗಮೇಶ್ವರ್ ರವರಿಂದ ತೇರಿನ ಮೆರವಣಿಗೆಗೆ ಚಾಲನೆ ನೀಡಲಾಯಿತು.</p>.<p>ಹಳೇ ನಗರ, ಕಾಗದನಗರ, ಕಾರೇಹಳ್ಳಿ, ಮಾವಿನಕೆರೆ ಮತ್ತು ಇತರೆ ಸುತ್ತಮುತ್ತಲ ಧರ್ಮ ಕೇಂದ್ರಗಳಿಂದ ಭಕ್ತರು ಆಗಮಿಸಿದ್ದರು. ಬ್ಯಾಂಡ್ ಸೆಟ್ ಮೂಲಕ ಮೆರವಣಿಗೆ ಪ್ರಾರಂಭಿಸಿದ ಭಕ್ತರು ಕೈಯಲ್ಲಿ ಮೊಂಭತ್ತಿಗಳನ್ನು ಹಿಡಿದು, ಪ್ರಾರ್ಥಿಸುತ್ತಾ ಸಾಲಾಗಿ ಮುನ್ನಡೆದರು.</p>.<p>ಭಕ್ತರಿಗೆ ಅಲ್ಲಲ್ಲಿ ಸಿಹಿ ಹಂಚಿ, ಪಟಾಕಿಗಳನ್ನು ಸಿಡಿಸಲಾಯಿತು. ಮೆರವಣಿಗೆ ನಂತರ ಈ ಬಾರಿ ವಿಶೇಷವಾದ ವಿದ್ಯುತ್ ದೀಪಾಲಂಕಾರ, ಪಟಾಕಿ ಮತ್ತು ಸಂಗೀತದೊಂದಿಗೆ ಮಾತೆಯ ತೇರನ್ನು ಮರಳಿ ದೇವಾಲಯದೊಳಗೆ ಬರಮಾಡಿಕೊಳ್ಳಲಾಯಿತು. ನಂತರ ಅನ್ನ ಸಂತರ್ಪಣೆ ನಡೆಯಿತು.</p>.<p>ಧರ್ಮ ಕೇಂದ್ರದ ಗುರುಗಳಾದ ಫಾದರ್ ಲ್ಯಾನ್ಸಿ ಡಿಸೋಜ, ಧರ್ಮಭಗೀನಿಯರು, ಪಂಚ ಯೋಜನೆಗಳ ಗ್ಯಾರಂಟಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>