<p><strong>ಭದ್ರಾವತಿ</strong>: ನಗರದ ಮುಖ್ಯರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಎಲ್ಲಿ ನೋಡಿದರೂ ಗುಂಡಿಗಳು, ತಗ್ಗು-ದಿನ್ನೆಗಳೇ ಕಾಣುತ್ತಿವೆ. ಕೆಲವೆಡೆ ದೊಡ್ಡ ಹೊಂಡಗಳೇ ನಿರ್ಮಾಣವಾಗಿದ್ದು, ವಾಹನ ಸವಾರರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಂತಾಗಿದೆ.</p>.<p>ಮುಖ್ಯ ಬಸ್ ನಿಲ್ದಾಣ, ಅಂಡರ್ ಬ್ರಿಡ್ಜ್, ರಂಗಪ್ಪ ವೃತ್ತ, ಮಾಧವಾಚಾರ್ ವೃತ್ತ, ಶಿವಮೊಗ್ಗ ಮಾರ್ಗದ ಹಳೆಯ ಸೇತುವೆ ರಸ್ತೆ, ಐ.ಟಿ.ಐ ರಸ್ತೆ, ಚೆನ್ನಗಿರಿ ರಸ್ತೆ, ಕಡದಕಟ್ಟೆ ರಸ್ತೆ ಹಾಗೂ ಈಚೆಗೆ ಲೋಕಾರ್ಪಣೆಗೊಂಡಿರುವ ಕಡದಕಟ್ಟೆ ಬಳಿಯ ನೂತನ ಫ್ಲೈ ಓವರ್ನಲ್ಲೂ ಗುಂಡಿಗಳು ನಿರ್ಮಾಣವಾಗಿವೆ.</p>.<p>ಕಡದಕಟ್ಟೆ ರಸ್ತೆ ಮೂಲಕ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ, ಐ.ಟಿ.ಐ ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣವಾಗಿದ್ದು, 1ರಿಂದ 2 ಕಿಲೋಮೀಟರ್ನಷ್ಟು ಅಂತರದ ರಸ್ತೆಯಂತೂ ಸಂಪೂರ್ಣವಾಗಿ ಹಾಳಾಗಿದೆ.</p>.<p>ಈ ರಸ್ತೆಗಳಲ್ಲಿ ಸಂಚರಿಸಲು ಬರೋಬ್ಬರಿ ಅರ್ಧ ಗಂಟೆಗೂ ಹೆಚ್ಚು ಸಮಯ ಬೇಕಾಗುತ್ತಿದೆ. ರಸ್ತೆಗೆ ಹಾಕಿದ್ದ ಜಲ್ಲಿಕಲ್ಲುಗಳು ಮೇಲೆದ್ದು ಬಂದಿದ್ದು, ಪ್ರಯಾಣಿಕರು ಹಗಲು ಹೊತ್ತಿನಲ್ಲೇ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಇನ್ನು ರಾತ್ರಿ ವೇಳೆ ಓಡಾಡುವವರ ಕಷ್ಟ ಹೇಳತೀರದು. </p>.<p class="Subhead">ತೇಪೆ ಕಾರ್ಯ:</p>.<p>ಪ್ರತಿ ವರ್ಷ ಮಳೆ ಸುರಿದಾಗ ನಗರದ ಮುಖ್ಯ ರಸ್ತೆಗಳಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು ತೆರೆದುಕೊಳ್ಳುತ್ತವೆ. ಲಕ್ಷಾಂತರ ವೆಚ್ಚ ಮಾಡಿ ತೇಪೆ ಹಾಕುವ ಕಾರ್ಯ ಕೈಗೊಳ್ಳಲಾಗುತ್ತದೆ. ಆದರೆ, ಈ ತಾತ್ಕಾಲಿಕ ಕಾಮಗಾರಿಯಿಂದ ರಸ್ತೆಗಳು 6 ತಿಂಗಳೂ ಸುಸ್ಥಿತಿಯಲ್ಲಿರುವುದಿಲ್ಲ. ಪ್ರತಿ ಮಳೆಗಾಲದಲ್ಲಿ ಎದುರಾಗುವ ರಸ್ತೆ ದುರವಸ್ಥೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ನಗರದ ಮುಖ್ಯರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಎಲ್ಲಿ ನೋಡಿದರೂ ಗುಂಡಿಗಳು, ತಗ್ಗು-ದಿನ್ನೆಗಳೇ ಕಾಣುತ್ತಿವೆ. ಕೆಲವೆಡೆ ದೊಡ್ಡ ಹೊಂಡಗಳೇ ನಿರ್ಮಾಣವಾಗಿದ್ದು, ವಾಹನ ಸವಾರರು ನಗರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಂತಾಗಿದೆ.</p>.<p>ಮುಖ್ಯ ಬಸ್ ನಿಲ್ದಾಣ, ಅಂಡರ್ ಬ್ರಿಡ್ಜ್, ರಂಗಪ್ಪ ವೃತ್ತ, ಮಾಧವಾಚಾರ್ ವೃತ್ತ, ಶಿವಮೊಗ್ಗ ಮಾರ್ಗದ ಹಳೆಯ ಸೇತುವೆ ರಸ್ತೆ, ಐ.ಟಿ.ಐ ರಸ್ತೆ, ಚೆನ್ನಗಿರಿ ರಸ್ತೆ, ಕಡದಕಟ್ಟೆ ರಸ್ತೆ ಹಾಗೂ ಈಚೆಗೆ ಲೋಕಾರ್ಪಣೆಗೊಂಡಿರುವ ಕಡದಕಟ್ಟೆ ಬಳಿಯ ನೂತನ ಫ್ಲೈ ಓವರ್ನಲ್ಲೂ ಗುಂಡಿಗಳು ನಿರ್ಮಾಣವಾಗಿವೆ.</p>.<p>ಕಡದಕಟ್ಟೆ ರಸ್ತೆ ಮೂಲಕ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ, ಐ.ಟಿ.ಐ ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣವಾಗಿದ್ದು, 1ರಿಂದ 2 ಕಿಲೋಮೀಟರ್ನಷ್ಟು ಅಂತರದ ರಸ್ತೆಯಂತೂ ಸಂಪೂರ್ಣವಾಗಿ ಹಾಳಾಗಿದೆ.</p>.<p>ಈ ರಸ್ತೆಗಳಲ್ಲಿ ಸಂಚರಿಸಲು ಬರೋಬ್ಬರಿ ಅರ್ಧ ಗಂಟೆಗೂ ಹೆಚ್ಚು ಸಮಯ ಬೇಕಾಗುತ್ತಿದೆ. ರಸ್ತೆಗೆ ಹಾಕಿದ್ದ ಜಲ್ಲಿಕಲ್ಲುಗಳು ಮೇಲೆದ್ದು ಬಂದಿದ್ದು, ಪ್ರಯಾಣಿಕರು ಹಗಲು ಹೊತ್ತಿನಲ್ಲೇ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಇನ್ನು ರಾತ್ರಿ ವೇಳೆ ಓಡಾಡುವವರ ಕಷ್ಟ ಹೇಳತೀರದು. </p>.<p class="Subhead">ತೇಪೆ ಕಾರ್ಯ:</p>.<p>ಪ್ರತಿ ವರ್ಷ ಮಳೆ ಸುರಿದಾಗ ನಗರದ ಮುಖ್ಯ ರಸ್ತೆಗಳಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು ತೆರೆದುಕೊಳ್ಳುತ್ತವೆ. ಲಕ್ಷಾಂತರ ವೆಚ್ಚ ಮಾಡಿ ತೇಪೆ ಹಾಕುವ ಕಾರ್ಯ ಕೈಗೊಳ್ಳಲಾಗುತ್ತದೆ. ಆದರೆ, ಈ ತಾತ್ಕಾಲಿಕ ಕಾಮಗಾರಿಯಿಂದ ರಸ್ತೆಗಳು 6 ತಿಂಗಳೂ ಸುಸ್ಥಿತಿಯಲ್ಲಿರುವುದಿಲ್ಲ. ಪ್ರತಿ ಮಳೆಗಾಲದಲ್ಲಿ ಎದುರಾಗುವ ರಸ್ತೆ ದುರವಸ್ಥೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>