<p>ಭದ್ರಾವತಿ: ಕೆಂಡದಂತಹ ಬಿಸಿಲ ಝಳದಿಂದ ಬಳಲಿದ್ದ ನಗರದ ಜನತೆಗೆ ಬುಧವಾರ ಸಂಜೆ ಸುರಿದ ಈ ವರ್ಷದ ಮೊದಲ ಮಳೆ ತಂಪೆರೆಯಿತು. 20 ನಿಮಷಗಳ ಕಾಲ ಸುರಿದ ಮಳೆಯಿಂದಾಗಿ ತಣ್ಣನೆಯ ಗಾಳಿ ಬೀಸಿ ಮೈ–ಮನಗಳನ್ನು ಮುದಗೊಳಿಸಿತು.</p>.<p>ಬೆಳಿಗ್ಗೆಯಿಂದ ಬಿಸಿಲ ಝಳ ಹೆಚ್ಚಿದ್ದು, ಹೊತ್ತು ಏರುತ್ತಿದ್ದಂತೆಯೇ ಗಾಳಿ–ಧೂಳು, ಗುಡುಗಿನೊಂದಿಗೆ ಪ್ರತ್ಯಕ್ಷನಾದ ಮಳೆರಾಯ ಬಂದಷ್ಟೇ ವೇಗವಾಗಿ ಮರೆಯಾದ. ಯುಗಾದಿಯ ಆಸುಪಾಸಿನಲ್ಲಿ ಮಳೆ ಸುರಿಯಬಹುದು ಎಂಬ ಸ್ಥಳೀಯರ ನಿರೀಕ್ಷೆ ಹುಸಿಯಾಗಲಿಲ್ಲ.</p>.<p>ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲೂ ಮಳೆ ಸುರಿದ ವರದಿಯಾಗಿದೆ.</p>.<p>ಯುಗಾದಿ ಪೂರ್ವ ಪೂರ್ವ ಮಳೆ ಶುಭಸೂಚಕ. ಈ ಬಾರಿ ಮಳೆಗಾಲ ಸಮೃದ್ಧಿಯಾಗಬಹುದು. ಬಾಯಾರಿದ ಹೊಲ–ಗದ್ದೆ, ತೋಟಗಳು, ಜನ–ಜಾನುವಾರು, ಪ್ರಾಣಿ ಪಕ್ಷಿಗಳಿಗೆ ನೆಮ್ಮದಿ ತರಲಿದೆ ಎಂದು ನಗರದ ಜನರು ಮಾತನಾಡಿಕೊಂಡರು.</p>.<p>ದಾವಣಗೆರೆ ವರದಿ: ದಾವಣಗೆರೆ ತಾಲ್ಲೂಕಿನ ಆನಗೋಡು, ಮಾಯಕೊಂಡ ಹೋಬಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಬುಧವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿದೆ. ಬಿರುಗಾಳಿಗೆ ಕೊಡಗನೂರು ಕ್ರಾಸ್ ಬಳಿ ಮರವೊಂದು ಬಿದ್ದಿದ್ದು, ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾಯಿತು. ಹೆಬ್ಬಾಳು ಬಳಿಯೂ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭದ್ರಾವತಿ: ಕೆಂಡದಂತಹ ಬಿಸಿಲ ಝಳದಿಂದ ಬಳಲಿದ್ದ ನಗರದ ಜನತೆಗೆ ಬುಧವಾರ ಸಂಜೆ ಸುರಿದ ಈ ವರ್ಷದ ಮೊದಲ ಮಳೆ ತಂಪೆರೆಯಿತು. 20 ನಿಮಷಗಳ ಕಾಲ ಸುರಿದ ಮಳೆಯಿಂದಾಗಿ ತಣ್ಣನೆಯ ಗಾಳಿ ಬೀಸಿ ಮೈ–ಮನಗಳನ್ನು ಮುದಗೊಳಿಸಿತು.</p>.<p>ಬೆಳಿಗ್ಗೆಯಿಂದ ಬಿಸಿಲ ಝಳ ಹೆಚ್ಚಿದ್ದು, ಹೊತ್ತು ಏರುತ್ತಿದ್ದಂತೆಯೇ ಗಾಳಿ–ಧೂಳು, ಗುಡುಗಿನೊಂದಿಗೆ ಪ್ರತ್ಯಕ್ಷನಾದ ಮಳೆರಾಯ ಬಂದಷ್ಟೇ ವೇಗವಾಗಿ ಮರೆಯಾದ. ಯುಗಾದಿಯ ಆಸುಪಾಸಿನಲ್ಲಿ ಮಳೆ ಸುರಿಯಬಹುದು ಎಂಬ ಸ್ಥಳೀಯರ ನಿರೀಕ್ಷೆ ಹುಸಿಯಾಗಲಿಲ್ಲ.</p>.<p>ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲೂ ಮಳೆ ಸುರಿದ ವರದಿಯಾಗಿದೆ.</p>.<p>ಯುಗಾದಿ ಪೂರ್ವ ಪೂರ್ವ ಮಳೆ ಶುಭಸೂಚಕ. ಈ ಬಾರಿ ಮಳೆಗಾಲ ಸಮೃದ್ಧಿಯಾಗಬಹುದು. ಬಾಯಾರಿದ ಹೊಲ–ಗದ್ದೆ, ತೋಟಗಳು, ಜನ–ಜಾನುವಾರು, ಪ್ರಾಣಿ ಪಕ್ಷಿಗಳಿಗೆ ನೆಮ್ಮದಿ ತರಲಿದೆ ಎಂದು ನಗರದ ಜನರು ಮಾತನಾಡಿಕೊಂಡರು.</p>.<p>ದಾವಣಗೆರೆ ವರದಿ: ದಾವಣಗೆರೆ ತಾಲ್ಲೂಕಿನ ಆನಗೋಡು, ಮಾಯಕೊಂಡ ಹೋಬಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಬುಧವಾರ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿದೆ. ಬಿರುಗಾಳಿಗೆ ಕೊಡಗನೂರು ಕ್ರಾಸ್ ಬಳಿ ಮರವೊಂದು ಬಿದ್ದಿದ್ದು, ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾಯಿತು. ಹೆಬ್ಬಾಳು ಬಳಿಯೂ ಮಳೆ ಸುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>