<p><strong>ಭದ್ರಾವತಿ</strong> : ಆಟೋ ಚಾಲಕರೊಬ್ಬರು ಈ ಬಾರಿ ಸಹ ತಮ್ಮ ಆಟೋಗೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶನಿವಾರ ವಿಶಿಷ್ಟವಾಗಿ ಅಲಂಕಾರ ಮಾಡುವ ಮೂಲಕ ಕನ್ನಡಾಭಿಮಾನ ಪ್ರದರ್ಶಿಸಿದ್ದಾರೆ. <br> ಜನ್ನಾಪುರ ನಿವಾಸಿ, ಆಟೋ ಶಂಕರ್ ಎಂದೇ ಗುರುತಿಸಿಕೊಂಡಿರುವ ಚಾಲಕ ಶಂಕರಮೂರ್ತಿಯವರು ಕಳೆದ ವರ್ಷ ಸುಮಾರು 3 ಲಕ್ಷ ರು. ವೆಚ್ಚದಲ್ಲಿ ಹೊಸ ಆಟೋ ಖರೀದಿಸಿದ್ದರು. ಆಟೋ ನಂಬಿ ಬದುಕು ಸಾಗಿಸುತ್ತಿರುವ ಇವರು ಕನ್ನಡಾಭಿಮಾನಿಯಾಗಿದ್ದು, ಹೊಸ ಆಟೋಗೆ ಕಳೆದ ಬಾರಿ ವಿಶೇಷವಾಗಿ ಅಲಂಕಾರ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.</p>.<p>ಈ ಬಾರಿ ಮತ್ತಷ್ಟು ವಿಭಿನ್ನವಾಗಿ ಕರ್ನಾಟಕ ರತ್ನ, ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ರವರ ಪ್ರತಿಮೆಯನ್ನು ಆಟೋ ಮೇಲ್ಭಾಗದಲ್ಲಿರಿಸಿ, ಅದರ ಹಿಂಬದಿಯಲ್ಲಿ ಕರ್ನಾಟಕ ಭೂಪಟ ಇರಿಸಲಾಗಿದೆ. ಜೊತೆಗೆ ಬಣ್ಣ ಬಣ್ಣದ ಹೂವುಗಳಿಂದ, ಕೆಂಪು ಮತ್ತು ಹಳದಿ ನಾಡದ್ವಜದಿಂದ ಅಲಂಕರಿಸಲಾಗಿದೆ.</p>.<p>ಆಟೋ ಮುಂಭಾಗದಲ್ಲಿ ಬೃಹತ್ ಗಾತ್ರದ ಕೆಂಪು ಮತ್ತು ಹಳದಿ ಬಣ್ಣದ ಮಾಲೆಯನ್ನು ಹಾಕಲಾಗಿದೆ. ಆಟೋ ತುಂಬಾ ಆಕರ್ಷಕವಾಗಿ ಕಂಗೊಳಿಸುತ್ತಿದ್ದು, ಸ್ನೇಹಿತರು, ಬಂಧು-ಬಳಗದವರು, ಪ್ರಯಾಣಿಕರು, ರಸ್ತೆಯಲ್ಲಿ ಸಂಚರಿಸುವವರು ಆಟೋ ಮುಂಭಾಗ ನಿಂತುಕೊಂಡು ತಮ್ಮ ಮೊಬೈಲ್ಗಳಲ್ಲಿ ಪೋಟೋ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದಾರೆ.</p>.<p>ಆಟೋ ಶಂಕರ್ ಪ್ರತಿಕ್ರಿಯಿಸಿ, ನಾನು ಅಪ್ಪಟ್ಟ ಕನ್ನಡದ ಅಭಿಮಾನಿಯಾಗಿದ್ದು, ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ನಾನೇ ಸ್ವಯಂ ಪ್ರೇರಣೆಯಿಂದ ಆಟೋ ವಿಶೇಷವಾಗಿ ಅಲಂಕರಿಸಿದ್ದೇನೆ. ಈ ಬಾರಿ ನನಗೆ ನನ್ನ ಕಾರ್ಯಕ್ಕೆ ಸ್ನೇಹಿತರೊಬ್ಬರು ಸಹ ಕೈಜೋಡಿಸಿದ್ದು, ಇದರಿಂದಾಗಿ ಈ ಬಾರಿ ಅಲಂಕಾರ ಇನ್ನೂ ಹೆಚ್ಚಿನ ಆಕರ್ಷಣೆಯಿಂದ ಕೂಡಿದೆ ಎಂದರು.</p>.<p>ಜನ್ನಾಪುರ ಹಾಗು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ದಿನವಿಡೀ ಈ ಆಟೋ ಸಂಚಾರ ಬಹುತೇಕ ಜನರಲ್ಲಿ ತಮ್ಮಲ್ಲಿನ ಕನ್ನಡದ ಅಸ್ಮಿತೆಯನ್ನು ಪ್ರಶ್ನಿಸಿಕೊಳ್ಳುವಂತೆ ಮಾಡಿದೆ. ಸಾಮಾನ್ಯ ಆಟೋ ಚಾಲಕನ ಕನ್ನಡಾಭಿಮಾನಕ್ಕೆ ಒಂದು ನಮನವಿರಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong> : ಆಟೋ ಚಾಲಕರೊಬ್ಬರು ಈ ಬಾರಿ ಸಹ ತಮ್ಮ ಆಟೋಗೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶನಿವಾರ ವಿಶಿಷ್ಟವಾಗಿ ಅಲಂಕಾರ ಮಾಡುವ ಮೂಲಕ ಕನ್ನಡಾಭಿಮಾನ ಪ್ರದರ್ಶಿಸಿದ್ದಾರೆ. <br> ಜನ್ನಾಪುರ ನಿವಾಸಿ, ಆಟೋ ಶಂಕರ್ ಎಂದೇ ಗುರುತಿಸಿಕೊಂಡಿರುವ ಚಾಲಕ ಶಂಕರಮೂರ್ತಿಯವರು ಕಳೆದ ವರ್ಷ ಸುಮಾರು 3 ಲಕ್ಷ ರು. ವೆಚ್ಚದಲ್ಲಿ ಹೊಸ ಆಟೋ ಖರೀದಿಸಿದ್ದರು. ಆಟೋ ನಂಬಿ ಬದುಕು ಸಾಗಿಸುತ್ತಿರುವ ಇವರು ಕನ್ನಡಾಭಿಮಾನಿಯಾಗಿದ್ದು, ಹೊಸ ಆಟೋಗೆ ಕಳೆದ ಬಾರಿ ವಿಶೇಷವಾಗಿ ಅಲಂಕಾರ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.</p>.<p>ಈ ಬಾರಿ ಮತ್ತಷ್ಟು ವಿಭಿನ್ನವಾಗಿ ಕರ್ನಾಟಕ ರತ್ನ, ಚಲನಚಿತ್ರ ನಟ, ಸಮಾಜ ಸೇವಕ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ರವರ ಪ್ರತಿಮೆಯನ್ನು ಆಟೋ ಮೇಲ್ಭಾಗದಲ್ಲಿರಿಸಿ, ಅದರ ಹಿಂಬದಿಯಲ್ಲಿ ಕರ್ನಾಟಕ ಭೂಪಟ ಇರಿಸಲಾಗಿದೆ. ಜೊತೆಗೆ ಬಣ್ಣ ಬಣ್ಣದ ಹೂವುಗಳಿಂದ, ಕೆಂಪು ಮತ್ತು ಹಳದಿ ನಾಡದ್ವಜದಿಂದ ಅಲಂಕರಿಸಲಾಗಿದೆ.</p>.<p>ಆಟೋ ಮುಂಭಾಗದಲ್ಲಿ ಬೃಹತ್ ಗಾತ್ರದ ಕೆಂಪು ಮತ್ತು ಹಳದಿ ಬಣ್ಣದ ಮಾಲೆಯನ್ನು ಹಾಕಲಾಗಿದೆ. ಆಟೋ ತುಂಬಾ ಆಕರ್ಷಕವಾಗಿ ಕಂಗೊಳಿಸುತ್ತಿದ್ದು, ಸ್ನೇಹಿತರು, ಬಂಧು-ಬಳಗದವರು, ಪ್ರಯಾಣಿಕರು, ರಸ್ತೆಯಲ್ಲಿ ಸಂಚರಿಸುವವರು ಆಟೋ ಮುಂಭಾಗ ನಿಂತುಕೊಂಡು ತಮ್ಮ ಮೊಬೈಲ್ಗಳಲ್ಲಿ ಪೋಟೋ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದಾರೆ.</p>.<p>ಆಟೋ ಶಂಕರ್ ಪ್ರತಿಕ್ರಿಯಿಸಿ, ನಾನು ಅಪ್ಪಟ್ಟ ಕನ್ನಡದ ಅಭಿಮಾನಿಯಾಗಿದ್ದು, ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ನಾನೇ ಸ್ವಯಂ ಪ್ರೇರಣೆಯಿಂದ ಆಟೋ ವಿಶೇಷವಾಗಿ ಅಲಂಕರಿಸಿದ್ದೇನೆ. ಈ ಬಾರಿ ನನಗೆ ನನ್ನ ಕಾರ್ಯಕ್ಕೆ ಸ್ನೇಹಿತರೊಬ್ಬರು ಸಹ ಕೈಜೋಡಿಸಿದ್ದು, ಇದರಿಂದಾಗಿ ಈ ಬಾರಿ ಅಲಂಕಾರ ಇನ್ನೂ ಹೆಚ್ಚಿನ ಆಕರ್ಷಣೆಯಿಂದ ಕೂಡಿದೆ ಎಂದರು.</p>.<p>ಜನ್ನಾಪುರ ಹಾಗು ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ದಿನವಿಡೀ ಈ ಆಟೋ ಸಂಚಾರ ಬಹುತೇಕ ಜನರಲ್ಲಿ ತಮ್ಮಲ್ಲಿನ ಕನ್ನಡದ ಅಸ್ಮಿತೆಯನ್ನು ಪ್ರಶ್ನಿಸಿಕೊಳ್ಳುವಂತೆ ಮಾಡಿದೆ. ಸಾಮಾನ್ಯ ಆಟೋ ಚಾಲಕನ ಕನ್ನಡಾಭಿಮಾನಕ್ಕೆ ಒಂದು ನಮನವಿರಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>