2004ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಅಪ್ಪಾಜಿ ಅವರನ್ನು ಸೋಲಿಸಿದ್ದ ಸಂಗಮೇಶ್ವರ 2008ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು. 2013ರಲ್ಲಿ ಸಂಗಮೇಶ್ವರ್ ಅವರಿಗೆ ಕೈಕೊಟ್ಟ ಕಾಂಗ್ರೆಸ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಿ.ಎಂ. ಇಬ್ರಾಹಿಂ ಅವರನ್ನು ಕಣಕ್ಕೆ ಇಳಿಸಿತ್ತು. ಬಂಡಾಯದ ಬಾವುಟ ಹಾರಿಸಿದ್ದ ಸಂಗಮೇಶ್ವರ ಹಾಗೂ ಇಬ್ರಾಹಿಂ ಅವರ ಕಿತ್ತಾಟದ ಲಾಭ ಪಡೆದ ಅಪ್ಪಾಜಿ ಭಾರಿ ಮತಗಳ ಅಂತರದಲ್ಲಿ ಗೆದ್ದಿದ್ದರು. ಟಿಕೆಟ್ ಹಂಚಿಕೆಯ ಯಡವಟ್ಟಿನಿಂದ ಕಾಂಗ್ರೆಸ್ ಗೆಲುವಿನ ಅವಕಾಶ ಕಳೆದುಕೊಂಡಿತ್ತು.