<p><strong>ಭದ್ರಾವತಿ</strong>: ತಾಲ್ಲೂಕಿನ ಗೊಂದಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಕುರಿಯನ್ನು ಎಳೆದೊಯ್ದ ಚಿರತೆ ಕೊಂದು ಹಾಕಿದೆ.</p>.<p>ಕುರಿಯನ್ನು ಸಮೀಪದ ಕಾಡಿಗೆ ಎಳೆದೊಯ್ದು ಅರ್ಧಂಬರ್ಧ ತಿಂದು ಹಾಕಿದೆ. 3 ದಿನದ ಹಿಂದೆಯಷ್ಟೇ ರೈತ ನರಸಿಂಹೇಗೌಡ ಅವರ ಮನೆ ಬಳಿ ಕುರಿಗಳನ್ನು ಕಟ್ಟಿದ್ದ ಕೊಟ್ಟಿಗೆ ಬಳಿ ಚಿರತೆ ಬಂದು ಕುಳಿತಿತ್ತು. ರಾತ್ರಿ ಮೂತ್ರ ವಿಸರ್ಜನೆಗೆ ಮನೆ ಹೊರಗೆ ಬಂದಿದ್ದ ನರಸಿಂಹೇಗೌಡ ಚಿರತೆ ಕಂಡು ಕೂಗಿದಾಗ ಪರಾರಿಯಾಗಿತ್ತು. </p>.<p>ಜ. 13 ರಂದು ಅದೇ ಗ್ರಾಮದ ಗಂಗಾನಾಯ್ಕ ಅವರ ತೋಟದ ಮನೆಯ ಅಂಗಳದಲ್ಲಿ ಮಲಗಿದ್ದ ಜರ್ಮನ್ ಶೆಫರ್ಡ್ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿತ್ತು. ಗೊಂದಿ ಗ್ರಾಮದಲ್ಲಿ ಚಿರತೆ ದಾಳಿ ನಿರಂತರವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.</p>.<p>ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ತಾಲ್ಲೂಕಿನ ಗೊಂದಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಮನೆ ಅಂಗಳದಲ್ಲಿ ಕಟ್ಟಿ ಹಾಕಿದ್ದ ಕುರಿಯನ್ನು ಎಳೆದೊಯ್ದ ಚಿರತೆ ಕೊಂದು ಹಾಕಿದೆ.</p>.<p>ಕುರಿಯನ್ನು ಸಮೀಪದ ಕಾಡಿಗೆ ಎಳೆದೊಯ್ದು ಅರ್ಧಂಬರ್ಧ ತಿಂದು ಹಾಕಿದೆ. 3 ದಿನದ ಹಿಂದೆಯಷ್ಟೇ ರೈತ ನರಸಿಂಹೇಗೌಡ ಅವರ ಮನೆ ಬಳಿ ಕುರಿಗಳನ್ನು ಕಟ್ಟಿದ್ದ ಕೊಟ್ಟಿಗೆ ಬಳಿ ಚಿರತೆ ಬಂದು ಕುಳಿತಿತ್ತು. ರಾತ್ರಿ ಮೂತ್ರ ವಿಸರ್ಜನೆಗೆ ಮನೆ ಹೊರಗೆ ಬಂದಿದ್ದ ನರಸಿಂಹೇಗೌಡ ಚಿರತೆ ಕಂಡು ಕೂಗಿದಾಗ ಪರಾರಿಯಾಗಿತ್ತು. </p>.<p>ಜ. 13 ರಂದು ಅದೇ ಗ್ರಾಮದ ಗಂಗಾನಾಯ್ಕ ಅವರ ತೋಟದ ಮನೆಯ ಅಂಗಳದಲ್ಲಿ ಮಲಗಿದ್ದ ಜರ್ಮನ್ ಶೆಫರ್ಡ್ ನಾಯಿಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿತ್ತು. ಗೊಂದಿ ಗ್ರಾಮದಲ್ಲಿ ಚಿರತೆ ದಾಳಿ ನಿರಂತರವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.</p>.<p>ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>