<p><strong>ಭದ್ರಾವತಿ:</strong> ನಟ ದಿವಂಗತ ಪುನೀತ್ ರಾಜಕುಮಾರ್ ನಾಡಿನ ಸಾಂಸ್ಕೃತಿಕ ನಾಯಕ ಎಂದು ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ಬಣ್ಣಿಸಿದರು.</p>.<p>ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ನಗರದ ನ್ಯೂ ಟೌನ್ ಅಯ್ಯಪ್ಪ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್ ರಾಜಕುಮಾರ್ 50ನೇ ವರ್ಷದ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜ ವಿಕ್ರಂ, ಹಿರಿಯ ಕಲಾವಿದ ಜೆ.ಪಿ.ನಂಜುಂಡೇಗೌಡ ಹಾಗೂ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಎನ್.ದೇವರಾಜ್ ಮಾತನಾಡಿದರು.</p>.<p>ದೈಹಿಕ ಶಿಕ್ಷಣ ನಿವೃತ್ತ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ.ಹನುಮಂತಯ್ಯ ಅವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಘದ ಪದಾಧಿಕಾರಿಗಳು, ಕಲಾವಿದರು ಪಾಲ್ಗೊಂಡಿದ್ದರು. ಕಲಾವಿದರು ಪುನೀತ್ ರಾಜಕುಮಾರ್ ಚಲನಚಿತ್ರಗಳ ಗೀತೆಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ನಟ ದಿವಂಗತ ಪುನೀತ್ ರಾಜಕುಮಾರ್ ನಾಡಿನ ಸಾಂಸ್ಕೃತಿಕ ನಾಯಕ ಎಂದು ಎರೇಹಳ್ಳಿ ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಕೋಗಲೂರು ತಿಪ್ಪೇಸ್ವಾಮಿ ಬಣ್ಣಿಸಿದರು.</p>.<p>ಶಿವಮೊಗ್ಗ ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ನಗರದ ನ್ಯೂ ಟೌನ್ ಅಯ್ಯಪ್ಪ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಕರ್ನಾಟಕ ರತ್ನ, ನಟ, ಸಮಾಜ ಸೇವಕ ಪುನೀತ್ ರಾಜಕುಮಾರ್ 50ನೇ ವರ್ಷದ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ನಟರಾಜ್, ಸಂಘದ ಗೌರವ ಸಲಹೆಗಾರ ರಾಜ ವಿಕ್ರಂ, ಹಿರಿಯ ಕಲಾವಿದ ಜೆ.ಪಿ.ನಂಜುಂಡೇಗೌಡ ಹಾಗೂ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಎನ್.ದೇವರಾಜ್ ಮಾತನಾಡಿದರು.</p>.<p>ದೈಹಿಕ ಶಿಕ್ಷಣ ನಿವೃತ್ತ ಶಿಕ್ಷಕ, ಕಲಾವಿದ ಅಪೇಕ್ಷ ಮಂಜುನಾಥ್ ಮತ್ತು ರಂಗ ಕಲಾವಿದ ವೈ.ಕೆ.ಹನುಮಂತಯ್ಯ ಅವರನ್ನು ಗೌರವಿಸಲಾಯಿತು. ಸಂಘದ ಅಧ್ಯಕ್ಷ ಬಿ.ಎ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.</p>.<p>ಸಂಘದ ಪದಾಧಿಕಾರಿಗಳು, ಕಲಾವಿದರು ಪಾಲ್ಗೊಂಡಿದ್ದರು. ಕಲಾವಿದರು ಪುನೀತ್ ರಾಜಕುಮಾರ್ ಚಲನಚಿತ್ರಗಳ ಗೀತೆಗಳನ್ನು ಹಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>