<p><strong>ಭದ್ರಾವತಿ</strong>: ಇಲ್ಲಿನ 22ನೇ ವಾರ್ಡಿನ ಉಜ್ಜನಿಪುರ ಮುಖ್ಯ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಮುಂದಾಗಿರುವ ನಗರಸಭೆ ಸಿಬ್ಬಂದಿ ಇದಕ್ಕಾಗಿ ರಂಗೋಲಿ ಬಿಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.</p>.<p>ಹಲವು ಬಾರಿ ಮನವಿ ಮಾಡಿದರೂ ಕೆಲವರು ಈ ಆವರಣದಲ್ಲಿ ತ್ಯಾಜ್ಯ ಎಸೆಯುತ್ತಿದ್ದರು. ಇತ್ತೀಚೆಗೆ ನಗರಸಭೆ ಸಿಬ್ಬಂದಿ ಈ ಸ್ಥಳವನ್ನು ಸ್ವಚ್ಛ ಮಾಡಿ ರಂಗೋಲಿ ಬಿಡಿಸಿದ್ದರು.</p>.<p>ಹೀಗೆ ಆವರಣದಲ್ಲಿ ಮೂರು ಕಡೆ ರಂಗೋಲಿ ಬಿಡಿಸಿದ್ದಲ್ಲದೇ ಇನ್ನು ಮುಂದೆ ಈ ಸ್ಥಳದಲ್ಲಿ ತ್ಯಾಜ್ಯ ಎಸೆದರೆ ₹ 500 ದಂಡ ವಿಧಿಸುವುದಾಗಿ ರಂಗೋಲಿಯಲ್ಲಿ ಬರೆದು ಎಚ್ಚರಿಸಲಾಗಿದೆ.</p>.<p>‘ಕರ್ನಾಟಕ ಮುನ್ಸಿಪಾಲಿಟಿಗಳ ಅಧಿನಿಯಮ 1964ರ ಅಡಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದರೆ ದಂಡ ವಿಧಿಸಲು ಅವಕಾಶವಿದೆ. ದಂಡ ವಿಧಿಸುವ ಮೊದಲು ಜನರಲ್ಲಿ ಜಾಗೃತಿ ಮೂಡಿಸಲು ಈ ಪ್ರಯೋಗ ಮಾಡಲಾಗಿದೆ’ ಎಂದು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಎಂ. ಪಲ್ಲವಿ ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಸಂದೇಶ ಸಾರುವ ಕರಪತ್ರಗಳನ್ನು ವಿತರಿಸಲಾಯಿತು.</p>.<p>ನಗರಸಭೆ ಸಮುದಾಯ ಸಂಚಾಲಕರು, ಸಿಬ್ಬಂದಿ ಹಾಗೂ 22ನೇ ವಾರ್ಡಿನ ನಾಗರಿಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-42-1465410431</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ</strong>: ಇಲ್ಲಿನ 22ನೇ ವಾರ್ಡಿನ ಉಜ್ಜನಿಪುರ ಮುಖ್ಯ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಮುಂದಾಗಿರುವ ನಗರಸಭೆ ಸಿಬ್ಬಂದಿ ಇದಕ್ಕಾಗಿ ರಂಗೋಲಿ ಬಿಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.</p>.<p>ಹಲವು ಬಾರಿ ಮನವಿ ಮಾಡಿದರೂ ಕೆಲವರು ಈ ಆವರಣದಲ್ಲಿ ತ್ಯಾಜ್ಯ ಎಸೆಯುತ್ತಿದ್ದರು. ಇತ್ತೀಚೆಗೆ ನಗರಸಭೆ ಸಿಬ್ಬಂದಿ ಈ ಸ್ಥಳವನ್ನು ಸ್ವಚ್ಛ ಮಾಡಿ ರಂಗೋಲಿ ಬಿಡಿಸಿದ್ದರು.</p>.<p>ಹೀಗೆ ಆವರಣದಲ್ಲಿ ಮೂರು ಕಡೆ ರಂಗೋಲಿ ಬಿಡಿಸಿದ್ದಲ್ಲದೇ ಇನ್ನು ಮುಂದೆ ಈ ಸ್ಥಳದಲ್ಲಿ ತ್ಯಾಜ್ಯ ಎಸೆದರೆ ₹ 500 ದಂಡ ವಿಧಿಸುವುದಾಗಿ ರಂಗೋಲಿಯಲ್ಲಿ ಬರೆದು ಎಚ್ಚರಿಸಲಾಗಿದೆ.</p>.<p>‘ಕರ್ನಾಟಕ ಮುನ್ಸಿಪಾಲಿಟಿಗಳ ಅಧಿನಿಯಮ 1964ರ ಅಡಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದರೆ ದಂಡ ವಿಧಿಸಲು ಅವಕಾಶವಿದೆ. ದಂಡ ವಿಧಿಸುವ ಮೊದಲು ಜನರಲ್ಲಿ ಜಾಗೃತಿ ಮೂಡಿಸಲು ಈ ಪ್ರಯೋಗ ಮಾಡಲಾಗಿದೆ’ ಎಂದು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಎಂ. ಪಲ್ಲವಿ ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಸಂದೇಶ ಸಾರುವ ಕರಪತ್ರಗಳನ್ನು ವಿತರಿಸಲಾಯಿತು.</p>.<p>ನಗರಸಭೆ ಸಮುದಾಯ ಸಂಚಾಲಕರು, ಸಿಬ್ಬಂದಿ ಹಾಗೂ 22ನೇ ವಾರ್ಡಿನ ನಾಗರಿಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-42-1465410431</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>