<p><strong>ಶಿವಮೊಗ್ಗ</strong>: ಪ್ರೀತಿಸಿ ಮನೆ ಬಿಟ್ಟು ಹೋಗಿದ್ದ ಜೋಡಿಗೆ ಬೆಂಬಲ ನೀಡಿದ್ದರು ಎಂಬ ಕಾರಣಕ್ಕೆ ಹುಡುಗಿಯ ಸಹೋದರ ಹಾಗೂ ಆತನ ಸ್ನೇಹಿತರು ನಡೆಸಿದ ಹಲ್ಲೆಯಿಂದ ಭದ್ರಾವತಿಯ ಜೈ ಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ಇಬ್ಬರು ಮೃತಪಟ್ಟಿದ್ದಾರೆ.</p><p>ಜೈಭೀಮ್ ನಗರದ ನಿವಾಸಿಗಳಾದ ನಂದೀಶ್ ಹಾಗೂ ಸೃಷ್ಟಿ ಪರಸ್ಪರ ಪ್ರೀತಿಸುತ್ತಿದ್ದು, ಎರಡು ದಿನಗಳ ಹಿಂದೆ ಮನೆ ಬಿಟ್ಟು ಓಡಿಹೋಗಿದ್ದರು ಎಂದು ತಿಳಿದುಬಂದಿದೆ.</p><p>ಜೋಡಿ ವಾಪಸ್ ಶುಕ್ರವಾರ ಭದ್ರಾವತಿಗೆ ಬಂದಿದ್ದು, ಅಲ್ಲಿನ ಓಲ್ಡ್ ಟೌನ್ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ಪಡೆದಿತ್ತು.</p><p>ತನ್ನ ಸಹೋದರಿ ನಂದೀಶನ ಜೊತೆ ಹೋಗಿದ್ದು ಖಚಿತವಾಗುತ್ತಿದ್ದಂತೆಯೇ ಅವರಿಗೆ ಮನೆ ಬಿಟ್ಟು ಹೋಗಲು ಸಹಕರಿಸಿದ್ದರು ಎಂಬ ಕಾರಣಕ್ಕೆ ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ನಂದೀಶನ ಸ್ನೇಹಿತ ಕಿರಣ್ ಜೊತೆ ಜಗಳವಾಡಿದ್ದಾರೆ. ಈ ವೇಳೆ ಚಾಕು ಇರಿತದಿಂದ ತೀವ್ರ ಗಾಯಗೊಂಡ ಕಿರಣ್ (25) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಜಗಳ ಬಿಡಿಸಲು ಬಂದ ಸ್ಥಳೀಯರಾದ ಮಂಜುನಾಥ (65) ಅವರಿಗೂ ಆರೋಪಿಗಳು ಚಾಕು ಇರಿದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮಂಜುನಾಥ್ ಕೂಡ ಸಾವನ್ನಪ್ಪಿದ್ದಾರೆ.</p><p>'ಪ್ರೀತಿಸಿ ಮನೆ ಬಿಟ್ಟು ಹೋಗಿದ್ದ ಯುವಕ ಹಾಗೂ ಯುವತಿ ಇಬ್ಬರೂ ಪರಿಶಿಷ್ಟ ಸಮುದಾಯದವರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.</p><p>'ಪ್ರೀತಿಸಿ ಮನೆ ಬಿಟ್ಟು ಹೋಗಿದ್ದ ಯುವಕ ಹಾಗೂ ಯುವತಿ ಇಬ್ಬರೂ ಪರಿಶಿಷ್ಟ ಸಮುದಾಯದವರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಪ್ರೀತಿಸಿ ಮನೆ ಬಿಟ್ಟು ಹೋಗಿದ್ದ ಜೋಡಿಗೆ ಬೆಂಬಲ ನೀಡಿದ್ದರು ಎಂಬ ಕಾರಣಕ್ಕೆ ಹುಡುಗಿಯ ಸಹೋದರ ಹಾಗೂ ಆತನ ಸ್ನೇಹಿತರು ನಡೆಸಿದ ಹಲ್ಲೆಯಿಂದ ಭದ್ರಾವತಿಯ ಜೈ ಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ಇಬ್ಬರು ಮೃತಪಟ್ಟಿದ್ದಾರೆ.</p><p>ಜೈಭೀಮ್ ನಗರದ ನಿವಾಸಿಗಳಾದ ನಂದೀಶ್ ಹಾಗೂ ಸೃಷ್ಟಿ ಪರಸ್ಪರ ಪ್ರೀತಿಸುತ್ತಿದ್ದು, ಎರಡು ದಿನಗಳ ಹಿಂದೆ ಮನೆ ಬಿಟ್ಟು ಓಡಿಹೋಗಿದ್ದರು ಎಂದು ತಿಳಿದುಬಂದಿದೆ.</p><p>ಜೋಡಿ ವಾಪಸ್ ಶುಕ್ರವಾರ ಭದ್ರಾವತಿಗೆ ಬಂದಿದ್ದು, ಅಲ್ಲಿನ ಓಲ್ಡ್ ಟೌನ್ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ಪಡೆದಿತ್ತು.</p><p>ತನ್ನ ಸಹೋದರಿ ನಂದೀಶನ ಜೊತೆ ಹೋಗಿದ್ದು ಖಚಿತವಾಗುತ್ತಿದ್ದಂತೆಯೇ ಅವರಿಗೆ ಮನೆ ಬಿಟ್ಟು ಹೋಗಲು ಸಹಕರಿಸಿದ್ದರು ಎಂಬ ಕಾರಣಕ್ಕೆ ಯುವತಿಯ ಸಹೋದರ ಹಾಗೂ ಸ್ನೇಹಿತರು ಸೇರಿ ನಂದೀಶನ ಸ್ನೇಹಿತ ಕಿರಣ್ ಜೊತೆ ಜಗಳವಾಡಿದ್ದಾರೆ. ಈ ವೇಳೆ ಚಾಕು ಇರಿತದಿಂದ ತೀವ್ರ ಗಾಯಗೊಂಡ ಕಿರಣ್ (25) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಜಗಳ ಬಿಡಿಸಲು ಬಂದ ಸ್ಥಳೀಯರಾದ ಮಂಜುನಾಥ (65) ಅವರಿಗೂ ಆರೋಪಿಗಳು ಚಾಕು ಇರಿದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮಂಜುನಾಥ್ ಕೂಡ ಸಾವನ್ನಪ್ಪಿದ್ದಾರೆ.</p><p>'ಪ್ರೀತಿಸಿ ಮನೆ ಬಿಟ್ಟು ಹೋಗಿದ್ದ ಯುವಕ ಹಾಗೂ ಯುವತಿ ಇಬ್ಬರೂ ಪರಿಶಿಷ್ಟ ಸಮುದಾಯದವರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.</p><p>'ಪ್ರೀತಿಸಿ ಮನೆ ಬಿಟ್ಟು ಹೋಗಿದ್ದ ಯುವಕ ಹಾಗೂ ಯುವತಿ ಇಬ್ಬರೂ ಪರಿಶಿಷ್ಟ ಸಮುದಾಯದವರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ' ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>