<p><strong>ಭದ್ರಾವತಿ:</strong> ನಗರಸಭೆ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಅಧಿಕವಾಗುತ್ತಿದ್ದು, ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಕೆ.ಸಿ. ಗೀತಾ ರಾಜಕುಮಾರ್ ಸೂಚಿಸಿದರು.</p>.<p>ಇಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು.</p>.<p>‘ಈ ಹಿಂದೆ ಪೊಲೀಸ್ ಅಧಿಕಾರಿಗಳು ಪ್ರತಿನಿತ್ಯ ಸಂಜೆ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಮುಖಂಡರು, ಸಾರ್ವಜನಿಕರಿಂದ ಮಾಹಿತಿ ಪಡೆಯುತ್ತಿದ್ದರು. ಈಗ ಅಧಿಕಾರಿಗಳು ಗಮನಹರಿಸದ ಕಾರಣ ಸಮಸ್ಯೆ ಹೆಚ್ಚಿದೆ’ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಟಿ. ನಾಗರಾಜ್ ಹೇಳಿದರು.</p>.<p>‘ಈಗ ಪೊಲೀಸ್ ಅಧಿಕಾರಿಗಳಿಗೆ ಜನರ ಸಂಪರ್ಕವೇ ಇಲ್ಲವಾಗಿದೆ. ₹ 5 ಲಕ್ಷ ವೆಚ್ಚದಲ್ಲಿ ಟವರ್, ಮೈಕ್, ಸಿಗ್ನಲ್ ಅಳವಡಿಸಲಾಗಿತ್ತು. ಅವೆಲ್ಲವೂ ಈಗ ನಾಪತ್ತೆಯಾಗಿದೆ’ ಎಂದು ದೂರಿದರು.</p>.<p>‘ಭದ್ರಾ ಕಾಲೊನಿ ಸರ್ಕಾರಿ ಶಾಲೆ ಎದುರು ಅಪಘಾತಗಳು ಹೆಚ್ಚುತ್ತಿವೆ. ಅಲ್ಲಿ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನಗರದೆಲ್ಲೆಡೆ ಸಂಚಾರ ವ್ಯವಸ್ಥೆ ತುಂಬಾ ಹದಗೆಟ್ಟಿದೆ. ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಿ’ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸಸದಸ್ಯ ಚನ್ನಪ್ಪ ಹೇಳಿದರು.</p>.<p>‘ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ವಾಹನಗಳು ನಿಲ್ಲಿಸಿ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬಿ.ಎಚ್ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಅಂಗಡಿಗಳು ಹೆಚ್ಚಿದ್ದು, ಜನರಿಗೆ ಓಡಾಡಲು ಆಗದಂತಾಗಿದೆ’ ಎಂದು ಸದಸ್ಯರಾದ ಜಾರ್ಜ್, ಮೋಹನ್ಕುಮಾರ್ ದೂರಿದರು.</p>.<p>ಸದಸ್ಯ ಆರ್. ಶ್ರೇಯಸ್ ಎಲ್ಲಾ ವೃತ್ತಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯಿಸಿದರು.</p>.<p>‘ನಗರದೆಲ್ಲೆಡೆ ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ತೊಂದರೆಯಾಗುತ್ತಿದೆ. ಶಾಲೆಗಳ ಕಾಂಪೌಂಡ್ ಹಾರಿ ಕಿಡಿಗೇಡಿಗಳು ಮಧ್ಯ ಸೇವನೆ ಮಾಡುತ್ತಾರೆ. ಮಹಿಳೆಯರು ರಸ್ತೆಗಳಲ್ಲಿ ಓಡಾಡುವುದೇ ಕಷ್ಟವಾಗಿದೆ. ಈ ಬಗ್ಗೆ ಕ್ರಮ ಜರುಗಿಸಿ’ ಎಂದು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಸೂಚಿಸಿದರು.</p>.<p>‘ಸಂಚಾರ ನಿಯಮ ಪಾಲನೆ ಅರಿವು ಸೇರಿದಂತೆ ವಾಹನ ದಟ್ಟಣೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಪಿಐ ಶ್ರೀಶೈಲಕುಮಾರ್ ಹೇಳಿದರು.</p>.<p>ಪೌರಾಯುಕ್ತ ಪ್ರಕಾಶ್ ಎಂ.ಚೆನ್ನಪ್ಪನವರ್, ಪಿಎಸ್ಐ ಕವಿತಾ, ಕೆ. ಸುದೀಪ್ಕುಮಾರ್, ಕಾಂತರಾಜ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ನಗರಸಭೆ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಅಧಿಕವಾಗುತ್ತಿದ್ದು, ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಕೆ.ಸಿ. ಗೀತಾ ರಾಜಕುಮಾರ್ ಸೂಚಿಸಿದರು.</p>.<p>ಇಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದರು.</p>.<p>‘ಈ ಹಿಂದೆ ಪೊಲೀಸ್ ಅಧಿಕಾರಿಗಳು ಪ್ರತಿನಿತ್ಯ ಸಂಜೆ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಮುಖಂಡರು, ಸಾರ್ವಜನಿಕರಿಂದ ಮಾಹಿತಿ ಪಡೆಯುತ್ತಿದ್ದರು. ಈಗ ಅಧಿಕಾರಿಗಳು ಗಮನಹರಿಸದ ಕಾರಣ ಸಮಸ್ಯೆ ಹೆಚ್ಚಿದೆ’ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಟಿ. ನಾಗರಾಜ್ ಹೇಳಿದರು.</p>.<p>‘ಈಗ ಪೊಲೀಸ್ ಅಧಿಕಾರಿಗಳಿಗೆ ಜನರ ಸಂಪರ್ಕವೇ ಇಲ್ಲವಾಗಿದೆ. ₹ 5 ಲಕ್ಷ ವೆಚ್ಚದಲ್ಲಿ ಟವರ್, ಮೈಕ್, ಸಿಗ್ನಲ್ ಅಳವಡಿಸಲಾಗಿತ್ತು. ಅವೆಲ್ಲವೂ ಈಗ ನಾಪತ್ತೆಯಾಗಿದೆ’ ಎಂದು ದೂರಿದರು.</p>.<p>‘ಭದ್ರಾ ಕಾಲೊನಿ ಸರ್ಕಾರಿ ಶಾಲೆ ಎದುರು ಅಪಘಾತಗಳು ಹೆಚ್ಚುತ್ತಿವೆ. ಅಲ್ಲಿ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ನಗರದೆಲ್ಲೆಡೆ ಸಂಚಾರ ವ್ಯವಸ್ಥೆ ತುಂಬಾ ಹದಗೆಟ್ಟಿದೆ. ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಿ’ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸಸದಸ್ಯ ಚನ್ನಪ್ಪ ಹೇಳಿದರು.</p>.<p>‘ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ವಾಹನಗಳು ನಿಲ್ಲಿಸಿ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಬಿ.ಎಚ್ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಅಂಗಡಿಗಳು ಹೆಚ್ಚಿದ್ದು, ಜನರಿಗೆ ಓಡಾಡಲು ಆಗದಂತಾಗಿದೆ’ ಎಂದು ಸದಸ್ಯರಾದ ಜಾರ್ಜ್, ಮೋಹನ್ಕುಮಾರ್ ದೂರಿದರು.</p>.<p>ಸದಸ್ಯ ಆರ್. ಶ್ರೇಯಸ್ ಎಲ್ಲಾ ವೃತ್ತಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯಿಸಿದರು.</p>.<p>‘ನಗರದೆಲ್ಲೆಡೆ ರಸ್ತೆಗಳಲ್ಲಿ ಅಡ್ಡಾದಿಡ್ಡಿ ವಾಹನಗಳ ನಿಲುಗಡೆಯಿಂದ ತೊಂದರೆಯಾಗುತ್ತಿದೆ. ಶಾಲೆಗಳ ಕಾಂಪೌಂಡ್ ಹಾರಿ ಕಿಡಿಗೇಡಿಗಳು ಮಧ್ಯ ಸೇವನೆ ಮಾಡುತ್ತಾರೆ. ಮಹಿಳೆಯರು ರಸ್ತೆಗಳಲ್ಲಿ ಓಡಾಡುವುದೇ ಕಷ್ಟವಾಗಿದೆ. ಈ ಬಗ್ಗೆ ಕ್ರಮ ಜರುಗಿಸಿ’ ಎಂದು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಸೂಚಿಸಿದರು.</p>.<p>‘ಸಂಚಾರ ನಿಯಮ ಪಾಲನೆ ಅರಿವು ಸೇರಿದಂತೆ ವಾಹನ ದಟ್ಟಣೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಪಿಐ ಶ್ರೀಶೈಲಕುಮಾರ್ ಹೇಳಿದರು.</p>.<p>ಪೌರಾಯುಕ್ತ ಪ್ರಕಾಶ್ ಎಂ.ಚೆನ್ನಪ್ಪನವರ್, ಪಿಎಸ್ಐ ಕವಿತಾ, ಕೆ. ಸುದೀಪ್ಕುಮಾರ್, ಕಾಂತರಾಜ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>