<p><strong>ಸಾಗರ: ‘</strong>ವೈರಾಗ್ಯವೆಂದರೆ ಆಸೆಗೆ ಕಡಿವಾಣ ಹಾಕುವುದೇ ಹೊರತು ಜೀವನಕ್ಕೆ ವಿಮುಖರಾಗುವುದಲ್ಲ’ ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಶಾರದಾಂಬಾ ದೇವಸ್ಥಾನದಲ್ಲಿ ಗುರುವಾರ ನಡೆದ ಭಗವದ್ಗೀತೆ ಅಭಿಯಾನ ಕಾರ್ಯಕ್ರಮದಲ್ಲಿ ಅಭಿಯಾನದ ಭಿತ್ತಿಪತ್ರ ಬಿಡುಗಡೆಗೊಳಿಸಿ ‘ಶ್ರೀಧರರು ಮತ್ತು ಭಗವದ್ಗೀತೆ’ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.</p>.<p>‘ತಾಲ್ಲೂಕಿನ ವರದಪುರ ಕ್ಷೇತ್ರದ ಶ್ರೀಧರ ಸ್ವಾಮಿಗಳು ಶ್ರದ್ಧೆ ಮತ್ತು ವೈರಾಗ್ಯದ ಪ್ರತೀಕದಂತಿದ್ದರು. ಭೋಗದ ಕಡೆ ಮನಸ್ಸನ್ನು ಹರಿಯಬಿಡದೆ ಮೌಲ್ಯಗಳನ್ನು ಅಳವಡಿಸಿಕೊಂಡರೆ ಬದುಕು ಅರ್ಥಪೂರ್ಣವಾಗುತ್ತದೆ ಎಂಬ ಅವರ ಸಂದೇಶ ಇಂದಿಗೂ ಸಕಾಲಿಕವಾಗಿದೆ’ ಎಂದರು.</p>.<p>‘ನ. 30ರಂದು ಶಿವಮೊಗ್ಗದಲ್ಲಿ ಭಗವದ್ಗೀತಾ ಅಭಿಯಾನ ಮಹಾ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಅಭಿಯಾನದ ಮೂಲಕ ಸಕಾರಾತ್ಮಕ ಚಿಂತನೆ ಬೆಳೆಸುವ, ನಮ್ಮ ಸಂಸ್ಕೃತಿಯ ಶ್ರೇಷ್ಠತೆಯನ್ನು ಬಿಂಬಿಸುವ ಕಾಯಕ ನಡೆದಿದೆ’ ಎಂದು ಅವರು ತಿಳಿಸಿದರು.</p>.<p>ಭಗವದ್ಗೀತಾ ಅಭಿಯಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವಿ.ಜಯರಾಮ್, ಪ್ರಮುಖರಾದ ಮ.ಸ.ನಂಜುಂಡಸ್ವಾಮಿ, ಕೃಷ್ಣಮೂರ್ತಿ ವಾಮನಾಚಾರ್, ಜ್ಯೋತಿ ಮಣೂರು, ಬದರೀನಾಥ್, ಸವಿತಾ ಶ್ರೀಕಾಂತ್, ಪ್ರಭಾ ವೆಂಕಟೇಶ್, ಜ್ಯೋತಿ ನಂಜುಂಡಸ್ವಾಮಿ, ಎಸ್.ಕೆ.ಪ್ರಭಾವತಿ, ರೇಷ್ಮಾ ರಘುಪತಿ, ಕಸ್ತೂರಿ ಕೃಷ್ಣಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ‘</strong>ವೈರಾಗ್ಯವೆಂದರೆ ಆಸೆಗೆ ಕಡಿವಾಣ ಹಾಕುವುದೇ ಹೊರತು ಜೀವನಕ್ಕೆ ವಿಮುಖರಾಗುವುದಲ್ಲ’ ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಶಾರದಾಂಬಾ ದೇವಸ್ಥಾನದಲ್ಲಿ ಗುರುವಾರ ನಡೆದ ಭಗವದ್ಗೀತೆ ಅಭಿಯಾನ ಕಾರ್ಯಕ್ರಮದಲ್ಲಿ ಅಭಿಯಾನದ ಭಿತ್ತಿಪತ್ರ ಬಿಡುಗಡೆಗೊಳಿಸಿ ‘ಶ್ರೀಧರರು ಮತ್ತು ಭಗವದ್ಗೀತೆ’ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.</p>.<p>‘ತಾಲ್ಲೂಕಿನ ವರದಪುರ ಕ್ಷೇತ್ರದ ಶ್ರೀಧರ ಸ್ವಾಮಿಗಳು ಶ್ರದ್ಧೆ ಮತ್ತು ವೈರಾಗ್ಯದ ಪ್ರತೀಕದಂತಿದ್ದರು. ಭೋಗದ ಕಡೆ ಮನಸ್ಸನ್ನು ಹರಿಯಬಿಡದೆ ಮೌಲ್ಯಗಳನ್ನು ಅಳವಡಿಸಿಕೊಂಡರೆ ಬದುಕು ಅರ್ಥಪೂರ್ಣವಾಗುತ್ತದೆ ಎಂಬ ಅವರ ಸಂದೇಶ ಇಂದಿಗೂ ಸಕಾಲಿಕವಾಗಿದೆ’ ಎಂದರು.</p>.<p>‘ನ. 30ರಂದು ಶಿವಮೊಗ್ಗದಲ್ಲಿ ಭಗವದ್ಗೀತಾ ಅಭಿಯಾನ ಮಹಾ ಸಮರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಅಭಿಯಾನದ ಮೂಲಕ ಸಕಾರಾತ್ಮಕ ಚಿಂತನೆ ಬೆಳೆಸುವ, ನಮ್ಮ ಸಂಸ್ಕೃತಿಯ ಶ್ರೇಷ್ಠತೆಯನ್ನು ಬಿಂಬಿಸುವ ಕಾಯಕ ನಡೆದಿದೆ’ ಎಂದು ಅವರು ತಿಳಿಸಿದರು.</p>.<p>ಭಗವದ್ಗೀತಾ ಅಭಿಯಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವಿ.ಜಯರಾಮ್, ಪ್ರಮುಖರಾದ ಮ.ಸ.ನಂಜುಂಡಸ್ವಾಮಿ, ಕೃಷ್ಣಮೂರ್ತಿ ವಾಮನಾಚಾರ್, ಜ್ಯೋತಿ ಮಣೂರು, ಬದರೀನಾಥ್, ಸವಿತಾ ಶ್ರೀಕಾಂತ್, ಪ್ರಭಾ ವೆಂಕಟೇಶ್, ಜ್ಯೋತಿ ನಂಜುಂಡಸ್ವಾಮಿ, ಎಸ್.ಕೆ.ಪ್ರಭಾವತಿ, ರೇಷ್ಮಾ ರಘುಪತಿ, ಕಸ್ತೂರಿ ಕೃಷ್ಣಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>