<p><strong>ಶಿವಮೊಗ್ಗ: ಭ</strong>ಗವದ್ಗೀತಾ ಅಭಿಯಾನ–ಕರ್ನಾಟಕ, ಸೋಂದಾ ಸ್ವರ್ಣವಲ್ಲೀ ಮಠ ಹಾಗೂ ಸ್ವರ್ಣರಶ್ಮೀ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಾದ್ಯಂತ ಭಗವದ್ಗೀತಾ ಅಭಿಯಾನ–2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸಮಿತಿಯ ಗೌರವ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ‘ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸಂಕಲ್ಪದಂತೆ ರಾಜ್ಯದಲ್ಲಿ ಈ ಅಭಿಯಾನ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಎಲ್ಲಾ ಶಾಲಾ–ಕಾಲೇಜುಗಳಲ್ಲಿ ಭಗವದ್ಗೀತೆ 11ನೇ ಅಧ್ಯಾಯದ ಪಠಣ ಆರಂಭವಾಗಿದೆ’ ಎಂದು ತಿಳಿಸಿದರು.</p>.<p>5ನೇ ತರಗತಿಯಿಂದ ಪದವಿ ಪೂರ್ವ ತರಗತಿಗಳವರೆಗೆ ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ. ಈಗಾಗಲೇ ಶಿವಮೊಗ್ಗ ತಾಲ್ಲೂಕಿನಲ್ಲಿ 135 ಶಿಕ್ಷಣ ಸಂಸ್ಥೆಗಳಲ್ಲಿ ಅಭಿಯಾನ ಆರಂಭವಾಗಿದೆ. ಪಠಣ ಹೇಳಿಕೊಡಲು 50 ಶಿಕ್ಷಕರನ್ನು ಸಜ್ಜುಗೊಳಿಸಲಾಗಿದೆ ಎಂದರು.</p>.<p>ವಿಶ್ವರೂಪ ದರ್ಶನದ 11ನೇ ಅಧ್ಯಾಯದ ಎಲ್ಲಾ ಶ್ಲೋಕಗಳನ್ನು ಮಕ್ಕಳಿಗೆ ಹೇಳಿಕೊಡಲಾಗುತ್ತಿದೆ. ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವವರು 11ನೇ ಅಧ್ಯಾಯದ ಎಲ್ಲಾ ಶ್ಲೋಕಗಳನ್ನು ಕಂಠಪಾಠ ಮಾಡಬೇಕು. 5 ನಿಮಿಷದ ಅವಧಿಯೊಳಗೆ ನಿರ್ಣಾಯಕರು ಸೂಚಿಸುವ ಯಾವುದೇ 10 ಶ್ಲೋಕಗಳನ್ನು ಅನುಕ್ರಮವಾಗಿ ಹೇಳಬೇಕು. ಹಾಗೆಯೇ ಭಾಷಣ ಸ್ಪರ್ಧೆ ಕೂಡ ಮೂರು ವಿಭಾಗಗಳಲ್ಲಿ ಹಮ್ಮಿಕೊಳ್ಳಲಾಗುವುದು. ತಾಲ್ಲೂಕು ಮಟ್ಟದ ಸ್ಪರ್ಧೆ ನ.22ರೊಳಗೆ, ಜಿಲ್ಲಾ ಮಟ್ಟದ ಸ್ಪರ್ಧೆ ನ.25ರೊಳಗೆ ನಡೆಯಲಿದೆ.</p>.<p>ರಾಜ್ಯಮಟ್ಟದ ಸ್ಪರ್ಧೆ ನ.29ರಂದು ನಡೆಯಲಿದೆ. ಅಂದು ಸಂಜೆ 9.30ಕ್ಕೆ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಶಿವಮೊಗ್ಗದ ಶೃಂಗೇರಿ ಶಂಕರ ಮಠಕ್ಕೆ ಬರಲಿದೆ. ಸೆ.9ರ ಸಂಜೆ 4 ಗಂಟೆಗೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ವಿವಿಧ ಭಜನಾ ಮಂಡಳಿ ಪ್ರಶಿಕ್ಷಕರ ಪ್ರವಚನ ಸಂಚಾಲಕರ ಸಭೆ ನಡೆಸಲಿದ್ದಾರೆ. ಸೆ.10ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಮಂಡಳಿಯ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಾಂಶುಪಾಲರ ಜೊತೆ ವರ್ಚುವಲ್ ಸಭೆ ನಡೆಯಲಿದೆ. ಸಂಜೆ 6 ಗಂಟೆಗೆ ಶಂಕರಮಠದಲ್ಲಿ ಸಭೆ ನಡೆಸಲಾಗುವುದು ಎಂದರು. <br><br>ಕಾರ್ಯಾಧ್ಯಕ್ಷ ಅಶೋಕ್ ಜಿ. ಭಟ್, ಲಕ್ಷ್ಮೀ ನಾರಾಯಣ ಕಾಶಿ, ಮೋಹನ್ ಜಾಧವ್, ಮ.ಸ. ನಂಜುಂಡಸ್ವಾಮಿ, ಡಿ.ಎಂ. ಹೆಗಡೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: ಭ</strong>ಗವದ್ಗೀತಾ ಅಭಿಯಾನ–ಕರ್ನಾಟಕ, ಸೋಂದಾ ಸ್ವರ್ಣವಲ್ಲೀ ಮಠ ಹಾಗೂ ಸ್ವರ್ಣರಶ್ಮೀ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಾದ್ಯಂತ ಭಗವದ್ಗೀತಾ ಅಭಿಯಾನ–2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿಯಾನ ಸಮಿತಿಯ ಗೌರವ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ‘ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸಂಕಲ್ಪದಂತೆ ರಾಜ್ಯದಲ್ಲಿ ಈ ಅಭಿಯಾನ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಎಲ್ಲಾ ಶಾಲಾ–ಕಾಲೇಜುಗಳಲ್ಲಿ ಭಗವದ್ಗೀತೆ 11ನೇ ಅಧ್ಯಾಯದ ಪಠಣ ಆರಂಭವಾಗಿದೆ’ ಎಂದು ತಿಳಿಸಿದರು.</p>.<p>5ನೇ ತರಗತಿಯಿಂದ ಪದವಿ ಪೂರ್ವ ತರಗತಿಗಳವರೆಗೆ ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ. ಈಗಾಗಲೇ ಶಿವಮೊಗ್ಗ ತಾಲ್ಲೂಕಿನಲ್ಲಿ 135 ಶಿಕ್ಷಣ ಸಂಸ್ಥೆಗಳಲ್ಲಿ ಅಭಿಯಾನ ಆರಂಭವಾಗಿದೆ. ಪಠಣ ಹೇಳಿಕೊಡಲು 50 ಶಿಕ್ಷಕರನ್ನು ಸಜ್ಜುಗೊಳಿಸಲಾಗಿದೆ ಎಂದರು.</p>.<p>ವಿಶ್ವರೂಪ ದರ್ಶನದ 11ನೇ ಅಧ್ಯಾಯದ ಎಲ್ಲಾ ಶ್ಲೋಕಗಳನ್ನು ಮಕ್ಕಳಿಗೆ ಹೇಳಿಕೊಡಲಾಗುತ್ತಿದೆ. ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವವರು 11ನೇ ಅಧ್ಯಾಯದ ಎಲ್ಲಾ ಶ್ಲೋಕಗಳನ್ನು ಕಂಠಪಾಠ ಮಾಡಬೇಕು. 5 ನಿಮಿಷದ ಅವಧಿಯೊಳಗೆ ನಿರ್ಣಾಯಕರು ಸೂಚಿಸುವ ಯಾವುದೇ 10 ಶ್ಲೋಕಗಳನ್ನು ಅನುಕ್ರಮವಾಗಿ ಹೇಳಬೇಕು. ಹಾಗೆಯೇ ಭಾಷಣ ಸ್ಪರ್ಧೆ ಕೂಡ ಮೂರು ವಿಭಾಗಗಳಲ್ಲಿ ಹಮ್ಮಿಕೊಳ್ಳಲಾಗುವುದು. ತಾಲ್ಲೂಕು ಮಟ್ಟದ ಸ್ಪರ್ಧೆ ನ.22ರೊಳಗೆ, ಜಿಲ್ಲಾ ಮಟ್ಟದ ಸ್ಪರ್ಧೆ ನ.25ರೊಳಗೆ ನಡೆಯಲಿದೆ.</p>.<p>ರಾಜ್ಯಮಟ್ಟದ ಸ್ಪರ್ಧೆ ನ.29ರಂದು ನಡೆಯಲಿದೆ. ಅಂದು ಸಂಜೆ 9.30ಕ್ಕೆ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಶಿವಮೊಗ್ಗದ ಶೃಂಗೇರಿ ಶಂಕರ ಮಠಕ್ಕೆ ಬರಲಿದೆ. ಸೆ.9ರ ಸಂಜೆ 4 ಗಂಟೆಗೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ವಿವಿಧ ಭಜನಾ ಮಂಡಳಿ ಪ್ರಶಿಕ್ಷಕರ ಪ್ರವಚನ ಸಂಚಾಲಕರ ಸಭೆ ನಡೆಸಲಿದ್ದಾರೆ. ಸೆ.10ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಮಂಡಳಿಯ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪ್ರಾಂಶುಪಾಲರ ಜೊತೆ ವರ್ಚುವಲ್ ಸಭೆ ನಡೆಯಲಿದೆ. ಸಂಜೆ 6 ಗಂಟೆಗೆ ಶಂಕರಮಠದಲ್ಲಿ ಸಭೆ ನಡೆಸಲಾಗುವುದು ಎಂದರು. <br><br>ಕಾರ್ಯಾಧ್ಯಕ್ಷ ಅಶೋಕ್ ಜಿ. ಭಟ್, ಲಕ್ಷ್ಮೀ ನಾರಾಯಣ ಕಾಶಿ, ಮೋಹನ್ ಜಾಧವ್, ಮ.ಸ. ನಂಜುಂಡಸ್ವಾಮಿ, ಡಿ.ಎಂ. ಹೆಗಡೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>