<p><strong>ಹೊಸನಗರ:</strong> ತಾಲ್ಲೂಕಿನಲ್ಲಿ ಭಾನುವಾರ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಐತಿಹಾಸಿಕ ಸ್ಥಳವಾದ ಬಿದನೂರು ಕೋಟೆಯ ಒಳಭಾಗದಲ್ಲಿರುವ ಕೊಳದ ದಂಡೆ ಸಂಪೂರ್ಣ ಕುಸಿದಿದೆ.</p>.<p>ಬಿದನೂರು ಕೋಟೆಯ ಮಹಾದ್ವಾರದಿಂದ ಒಳಗೆ ಹೋಗಿ ರಾಜದರ್ಬಾರ್ ಅಂಗಳಕ್ಕೆ ಹೋಗುವ ಮಾರ್ಗದ ಬಲಭಾಗದಲ್ಲಿ ಎರಡು ಕೊಳಗಳಿದ್ದು, ಒಂದು ಕೊಳದ ದಂಡೆ ಸಂಪೂರ್ಣ ಕುಸಿದಿದೆ.</p>.<p>ಈ ಕೊಳ ಬಹಳ ವರ್ಷಗಳ ಹಿಂದೆ ಕುಸಿದಿತ್ತು. ಕೆಂಪುಕಲ್ಲುಗಳಿಂದ ಅದೇ ಮಾದರಿಯಲ್ಲಿ ಪುನಃ ನಿರ್ಮಿಸಲಾಗಿತ್ತು. ಈಗ ಅದೇ ಕೊಳದ ದಂಡೆ ಸಂಪೂರ್ಣ ಕುಸಿದು ಬಿದ್ದಿದೆ.</p>.<p>‘ಕೊಳದ ಅಕ್ಕಪಕ್ಕ, ಕೊಳದ ದಂಡೆಯ ಮೇಲೆ ಗಿಡಗಂಟಿಗಳು ಬೆಳೆದಿದ್ದು ಅದನ್ನು ಸೂಕ್ತ ನಿರ್ವಹಣೆ ಮಾಡುತ್ತಿಲ್ಲ. ಗಿಡಗಂಟಿ ಬೆಳೆದಿರುವುದು ಕುಸಿತಕ್ಕೆ ಕಾರಣವಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ನಿತಿನ್ ನಗರ ಆರೋಪಿಸಿದ್ದಾರೆ.</p>.<p>‘ಕೊಳಗಳು ಮಾತ್ರವಲ್ಲದೇ ಕೋಟೆಯ ಬೃಹತ್ ಗೋಡೆಗಳ ಮೇಲೂ ಗಿಡಗಳು ಬೆಳೆದು ಪೊದೆಗಳಾಗುತ್ತಿರುವ ಕಾರಣ, ಅಲ್ಲಲ್ಲಿ ಗೋಡೆ ಕುಸಿತವೂ ಕಂಡು ಬಂದಿದೆ. ಸಂಬಂಧಪಟ್ಟ ಕೇಂದ್ರ ಪುರಾತತ್ವ ಇಲಾಖೆ ಸೂಕ್ತ ನಿರ್ವಹಣೆ ಮಾಡುವ ಮೂಲಕ ಐತಿಹಾಸಿಕ ಬಿದನೂರು ಕೋಟೆಯನ್ನು ಸಂರಕ್ಷಣೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಅಲ್ಲದೇ ಇದೀಗ ಕುಸಿದಿರುವ ಕೊಳದ ದಂಡೆ ಮತ್ತು ಗೋಡೆಯನ್ನು ಸೂಕ್ತ ತಂತ್ರಜ್ಞಾನ ಬಳಸಿ ಇತಿಹಾಸದ ಮಾದರಿಯಲ್ಲೇ ಪುನಃ ನಿರ್ಮಾಣ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸನಗರ:</strong> ತಾಲ್ಲೂಕಿನಲ್ಲಿ ಭಾನುವಾರ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಐತಿಹಾಸಿಕ ಸ್ಥಳವಾದ ಬಿದನೂರು ಕೋಟೆಯ ಒಳಭಾಗದಲ್ಲಿರುವ ಕೊಳದ ದಂಡೆ ಸಂಪೂರ್ಣ ಕುಸಿದಿದೆ.</p>.<p>ಬಿದನೂರು ಕೋಟೆಯ ಮಹಾದ್ವಾರದಿಂದ ಒಳಗೆ ಹೋಗಿ ರಾಜದರ್ಬಾರ್ ಅಂಗಳಕ್ಕೆ ಹೋಗುವ ಮಾರ್ಗದ ಬಲಭಾಗದಲ್ಲಿ ಎರಡು ಕೊಳಗಳಿದ್ದು, ಒಂದು ಕೊಳದ ದಂಡೆ ಸಂಪೂರ್ಣ ಕುಸಿದಿದೆ.</p>.<p>ಈ ಕೊಳ ಬಹಳ ವರ್ಷಗಳ ಹಿಂದೆ ಕುಸಿದಿತ್ತು. ಕೆಂಪುಕಲ್ಲುಗಳಿಂದ ಅದೇ ಮಾದರಿಯಲ್ಲಿ ಪುನಃ ನಿರ್ಮಿಸಲಾಗಿತ್ತು. ಈಗ ಅದೇ ಕೊಳದ ದಂಡೆ ಸಂಪೂರ್ಣ ಕುಸಿದು ಬಿದ್ದಿದೆ.</p>.<p>‘ಕೊಳದ ಅಕ್ಕಪಕ್ಕ, ಕೊಳದ ದಂಡೆಯ ಮೇಲೆ ಗಿಡಗಂಟಿಗಳು ಬೆಳೆದಿದ್ದು ಅದನ್ನು ಸೂಕ್ತ ನಿರ್ವಹಣೆ ಮಾಡುತ್ತಿಲ್ಲ. ಗಿಡಗಂಟಿ ಬೆಳೆದಿರುವುದು ಕುಸಿತಕ್ಕೆ ಕಾರಣವಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತ ನಿತಿನ್ ನಗರ ಆರೋಪಿಸಿದ್ದಾರೆ.</p>.<p>‘ಕೊಳಗಳು ಮಾತ್ರವಲ್ಲದೇ ಕೋಟೆಯ ಬೃಹತ್ ಗೋಡೆಗಳ ಮೇಲೂ ಗಿಡಗಳು ಬೆಳೆದು ಪೊದೆಗಳಾಗುತ್ತಿರುವ ಕಾರಣ, ಅಲ್ಲಲ್ಲಿ ಗೋಡೆ ಕುಸಿತವೂ ಕಂಡು ಬಂದಿದೆ. ಸಂಬಂಧಪಟ್ಟ ಕೇಂದ್ರ ಪುರಾತತ್ವ ಇಲಾಖೆ ಸೂಕ್ತ ನಿರ್ವಹಣೆ ಮಾಡುವ ಮೂಲಕ ಐತಿಹಾಸಿಕ ಬಿದನೂರು ಕೋಟೆಯನ್ನು ಸಂರಕ್ಷಣೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಅಲ್ಲದೇ ಇದೀಗ ಕುಸಿದಿರುವ ಕೊಳದ ದಂಡೆ ಮತ್ತು ಗೋಡೆಯನ್ನು ಸೂಕ್ತ ತಂತ್ರಜ್ಞಾನ ಬಳಸಿ ಇತಿಹಾಸದ ಮಾದರಿಯಲ್ಲೇ ಪುನಃ ನಿರ್ಮಾಣ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>