<p><strong>ಶಿವಮೊಗ್ಗ:</strong> ‘ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಪಾಕಿಸ್ತಾನ ಪರ ಶಿವಮೊಗ್ಗದ ವ್ಯಕ್ತಿಯೊಬ್ಬ ಅಭಿಪ್ರಾಯ ಹಂಚಿಕೊಂಡಿದ್ದಾನೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಮಂಗಳವಾರ ಬೆಳಿಗ್ಗೆ 10 ಗಂಟೆಯೊಳಗೆ ಬಂಧಿಸಬೇಕು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಪೊಲೀಸರಿಗೆ ಗಡುವು ನೀಡಿದ್ದಾರೆ.</p>.<p>ಕೋಟೆ ಠಾಣೆ ಇನ್ಸ್ಪೆಕ್ಟರ್ ಹರೀಶ್ ಕೆ.ಪಟೇಲ್ ಅವರನ್ನು ಸೋಮವಾರ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಿಯೋಗ ಭೇಟಿ ಮಾಡಿತು.</p>.<p>ನಗರದ ಟ್ಯಾಂಕ್ ಮೊಹಲ್ಲಾ ನಿವಾಸಿ ಇಬ್ಬು ಯಾನೆ ಇಬ್ರಾಹಿಮ್ ಖಾನ್ ಎಂಬಾತ ಪಾಕಿಸ್ತಾನ ಪರ ವಾಟ್ಸಾಪ್ ನಲ್ಲಿ ಅಭಿಪ್ರಾಯ ಹರಿಬಿಟ್ಟಿದ್ದಾನೆ ಎಂದು ಆರೋಪಿಸಿದ ನಿಯೋಗ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿತು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಬಸಪ್ಪ, ಪಾಕಿಸ್ತಾನ ಪರ ಅಭಿಪ್ರಾಯ ಹಂಚಿಕೊಂಡವರ ವಿರುದ್ಧ ನಿಗದಿತ ಗಡುವಿನಲ್ಲಿ ಪೊಲೀಸರು ಬಂಧಿಸದಿದ್ದರೆ ಪೋಲಿಸ್ ಠಾಣೆ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿರುವುದಾಗಿ ಹೇಳಿದರು.</p>.<p>ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ ರೆಡ್ಡಿ, ಪ್ರಮುಖರಾದ ದತ್ತಾತ್ರಿ, ದೀನ ದಾಯಳ, ಸುರೇಖಾ ಮುರಳೀಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಪಾಕಿಸ್ತಾನ ಪರ ಶಿವಮೊಗ್ಗದ ವ್ಯಕ್ತಿಯೊಬ್ಬ ಅಭಿಪ್ರಾಯ ಹಂಚಿಕೊಂಡಿದ್ದಾನೆ. ಆತನ ವಿರುದ್ಧ ಎಫ್ಐಆರ್ ದಾಖಲಿಸಿ ಮಂಗಳವಾರ ಬೆಳಿಗ್ಗೆ 10 ಗಂಟೆಯೊಳಗೆ ಬಂಧಿಸಬೇಕು’ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಪೊಲೀಸರಿಗೆ ಗಡುವು ನೀಡಿದ್ದಾರೆ.</p>.<p>ಕೋಟೆ ಠಾಣೆ ಇನ್ಸ್ಪೆಕ್ಟರ್ ಹರೀಶ್ ಕೆ.ಪಟೇಲ್ ಅವರನ್ನು ಸೋಮವಾರ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಿಯೋಗ ಭೇಟಿ ಮಾಡಿತು.</p>.<p>ನಗರದ ಟ್ಯಾಂಕ್ ಮೊಹಲ್ಲಾ ನಿವಾಸಿ ಇಬ್ಬು ಯಾನೆ ಇಬ್ರಾಹಿಮ್ ಖಾನ್ ಎಂಬಾತ ಪಾಕಿಸ್ತಾನ ಪರ ವಾಟ್ಸಾಪ್ ನಲ್ಲಿ ಅಭಿಪ್ರಾಯ ಹರಿಬಿಟ್ಟಿದ್ದಾನೆ ಎಂದು ಆರೋಪಿಸಿದ ನಿಯೋಗ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿತು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಬಸಪ್ಪ, ಪಾಕಿಸ್ತಾನ ಪರ ಅಭಿಪ್ರಾಯ ಹಂಚಿಕೊಂಡವರ ವಿರುದ್ಧ ನಿಗದಿತ ಗಡುವಿನಲ್ಲಿ ಪೊಲೀಸರು ಬಂಧಿಸದಿದ್ದರೆ ಪೋಲಿಸ್ ಠಾಣೆ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿರುವುದಾಗಿ ಹೇಳಿದರು.</p>.<p>ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ ರೆಡ್ಡಿ, ಪ್ರಮುಖರಾದ ದತ್ತಾತ್ರಿ, ದೀನ ದಾಯಳ, ಸುರೇಖಾ ಮುರಳೀಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>