ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಗಳು ಜಾತಿ, ಮತ, ಧರ್ಮಗಳನ್ನು ಒಡೆಯುವ ಕೆಲಸ ಮಾಡಬಾರದು. ವಿಷಕಾರಿ ಭಕ್ತರಿಂದ ಬಿಜೆಪಿಯೇ ಸರ್ವನಾಶವಾಗಲಿದೆ. ದೇಶದ ಅಭಿವೃದ್ಧಿ, ಜನಸಾಮಾನ್ಯರ ಬದುಕಿಗೆ ಯೋಜನೆಗಳನ್ನು ರೂಪಿಸುವ ಬದಲಿಗೆ ನಿರಂತರ ಬೆಲೆ ಏರಿಕೆ, ಸಂವಿಧಾನ ತಿದ್ದುಪಡಿ, ಅಶಾಂತಿಗೆ ಮುಂದಾಗಿ ಜನರ ನೆಮ್ಮದಿಗೆ ಕೊಳ್ಳಿ ಇಟ್ಟಿದೆ. ಈ ಬಗ್ಗೆ ಜನರು ಎಚ್ಚೆತ್ತಿದ್ದಾರೆ’ ಎಂದರು.