ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವೇನೂ ಶಾಸಕರಂತೆ ಕಾಣಲ್ವಾ: ಆಯನೂರು ಮಂಜುನಾಥ್‌ ಪ್ರಶ್ನೆ

Last Updated 9 ಆಗಸ್ಟ್ 2021, 14:07 IST
ಅಕ್ಷರ ಗಾತ್ರ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಎದುರೇ ಅವರದೇ ಪಕ್ಷದ ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅತಿವೃಷ್ಟಿ ಹಾನಿ ಪರಿಶೀಲನಾ ಸಭೆ ಮಧ್ಯೆ ಸಭಾಂಗಣಕ್ಕೆ ಬಂದ ಅವರು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ವಿರುದ್ಧ ಆಕ್ರೋಶ ಹೊರ ಹಾಕಿದರು.

ನಾವೇನು ಶಾಸಕರಲ್ಲವೇನು? ಮಷ್ಕಿರಿ ಮಾಡ್ತೀರಾ? ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತದ ಸಭೆಗೆ ತಮಗೆ ಆಹ್ವಾನ ನೀಡುತ್ತಿಲ್ಲ. ಮಾಹಿತಿ‌ ನೀಡುವುದಿಲ್ಲ. ಅನುದಾನ, ಪರಿಹಾರದ ಬಗ್ಗೆ ನಮಗೆ ಮಾಹಿತಿ ಸಿಗುವುದಿಲ್ಲ. ನಾವೇನು ನಿಮಗೆ ಶಾಸಕರ ರೀತಿ ಕಾಣಿಸೋದಿಲ್ವಾ? ಎಂದು ಪ್ರಶ್ನಿಸಿದರು. ಆಯನೂರು ಮಾತಿಗೆ ಸಭೆಯಲ್ಲಿದ್ದ ಸಾಗರ ಶಾಸಕ ಹರತಾಳು ಹಾಲಪ್ಪ ಸಾಥ್ ನೀಡಿದರು. ನಂತರ ಸಚಿವ ಈಶ್ವರಪ್ಪ ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT