<p><strong>ಶಿಕಾರಿಪುರ</strong>: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ಇಲ್ಲಿನ ಇಟ್ಟಿಗೆಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಮೇಲೆ ರಾಜ್ಯ ಸರ್ಕಾರ ನೀಡುತ್ತಿದ್ದ ₹ 5 ಪ್ರೋತ್ಸಾಹ ಧನ ಕಳೆದ 7 ತಿಂಗಳಿನಿಂದ ನಿಂತುಹೋಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಪಶು ಆಹಾರ ಘಟಕ ನಿರ್ಮಿಸಲಾಗಿದ್ದು, ಮೂಲ ಸೌಕರ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು ಎಂದ ಅವರು, ಗ್ರಾಮದಲ್ಲಿ ರೈಲ್ವೆ ಮಾರ್ಗ ಹಾದು ಹೋಗಲಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.</p>.<p>ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿದರು. </p>.<p>ಸಂಘದ ಕಾರ್ಯನಿರ್ವಾಹಕ ಎಚ್.ಲಕ್ಷ್ಮಣಪ್ಪಮ, ಗ್ರಾಮಪಂಚಾಯಿತಿ ಅಧ್ಯಕ್ಷೆ ಸುಶೀಲಬಾಯಿ, ಉಪಾಧ್ಯಕ್ಷ ಗಂಗಾನಾಯ್ಕ, ಸದಸ್ಯರಾದ ಸಿದ್ಧನಗೌಡ, ರೂಪ, ನಿರ್ದೇಶಕರಾದ ರುದ್ರಮ್ಮ, ಗಂಗಾಧರ, ಯೋಗೇಶ್ವರಪ್ಪ, ಪವನ, ಗಿರೀಶ್, ರಮೇಶ್, ರಾಜಶೇಖರ, ಕಿರಣ್, ಹನುಮಂತಪ್ಪ, ಗಿರಿಜಮ್ಮ, ಲಕ್ಷ್ಮಮ್ಮ ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ</strong>: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ಇಲ್ಲಿನ ಇಟ್ಟಿಗೆಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಮೇಲೆ ರಾಜ್ಯ ಸರ್ಕಾರ ನೀಡುತ್ತಿದ್ದ ₹ 5 ಪ್ರೋತ್ಸಾಹ ಧನ ಕಳೆದ 7 ತಿಂಗಳಿನಿಂದ ನಿಂತುಹೋಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಪಶು ಆಹಾರ ಘಟಕ ನಿರ್ಮಿಸಲಾಗಿದ್ದು, ಮೂಲ ಸೌಕರ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆಯೂ ಪರಿಶೀಲಿಸಲಾಗುವುದು ಎಂದ ಅವರು, ಗ್ರಾಮದಲ್ಲಿ ರೈಲ್ವೆ ಮಾರ್ಗ ಹಾದು ಹೋಗಲಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.</p>.<p>ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿದರು. </p>.<p>ಸಂಘದ ಕಾರ್ಯನಿರ್ವಾಹಕ ಎಚ್.ಲಕ್ಷ್ಮಣಪ್ಪಮ, ಗ್ರಾಮಪಂಚಾಯಿತಿ ಅಧ್ಯಕ್ಷೆ ಸುಶೀಲಬಾಯಿ, ಉಪಾಧ್ಯಕ್ಷ ಗಂಗಾನಾಯ್ಕ, ಸದಸ್ಯರಾದ ಸಿದ್ಧನಗೌಡ, ರೂಪ, ನಿರ್ದೇಶಕರಾದ ರುದ್ರಮ್ಮ, ಗಂಗಾಧರ, ಯೋಗೇಶ್ವರಪ್ಪ, ಪವನ, ಗಿರೀಶ್, ರಮೇಶ್, ರಾಜಶೇಖರ, ಕಿರಣ್, ಹನುಮಂತಪ್ಪ, ಗಿರಿಜಮ್ಮ, ಲಕ್ಷ್ಮಮ್ಮ ಇದ್ದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>