ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಪರ ಕಾಯ್ದೆ ವಿರುದ್ಧ ಸುಳ್ಳುಗಳ ವದಂತಿ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ
Last Updated 3 ಅಕ್ಟೋಬರ್ 2020, 12:11 IST
ಅಕ್ಷರ ಗಾತ್ರ

ಶಿವಮೊಗ್ಗ:ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಭೂಸುಧಾರಣಾ ಕಾಯ್ದೆಗೆತಿದ್ದುಪಡಿ ತಂದಿದೆ. ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಹಬ್ಬಿಸುತ್ತಿರುವ ಸುಳ್ಳು ವದಂತಿಗಳಿಗೆ ರೈತರು ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.

ಕಾಂಗ್ರೆಸ್‌,ರೈತಸಂಘಟನೆಗಳು ಸೇರಿದಂತೆಹಲವುಮುಖಂಡರು ಈ ಕಾಯ್ದೆಯ ವಿರುದ್ಧ ಅಪಪ್ರಚಾರಮಾಡುತ್ತಿದ್ದಾರೆ. ರಾಜಕೀಯ ಕಾರಣಗಳಿಗಾಗಿವಿರೋಧ ವ್ಯಕ್ತಪಡಿಸುತ್ತಿದ್ಧಾರೆ. ನಿಜವಾದ ರೈತರುಕಾಯ್ದೆ ಪರ ಇದ್ದಾರೆ. ಉಳಿದ ರೈತರು ವದಂತಿಗಳಿಗೆ ಕಿವಿಗೊಡಬಾರದು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿನಂತಿಸಿದರು.

ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್‌ ಮುಖಂಡರುಸದಾ ಮುಂದಿದ್ದಾರೆ.ಈ ಹಿಂದೆ ದೇಶದ ರಕ್ಷಣಾ ವ್ಯವಸ್ಥೆ ಬಲಗೊಳಿಸುವ ದೃಷ್ಟಿಯಿಂದ ಪ್ರಧಾನಿ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಮಾಡಿಕೊಂಡಿತ್ತು.ಆದರೆ, ಕಾಂಗ್ರೆಸ್‌ ಮುಖಂಡರುಹಗರಣ ನಡೆದಿದೆ ಎಂದು ಸುದ್ದಿ ಹಬ್ಬಿಸಿದ್ದರು. ಹಗರಣ ಕಾಣುತ್ತಿಲ್ಲ ಎಂದುಸುಪ್ರೀಂಕೋರ್ಟ್ ಹೇಳಿದಮೇಲೆ ತೆಪ್ಪಗಾದರು. ಪೌರತ್ವ ತಿದ್ದುಪಡಿ ಕಾಯ್ದೆವಿರುದ್ಧವೂ ಅಪಪ್ರಚಾರ ನಡೆಸಿದರು. ಆಯುಷ್ಮಾನ್ ‌ಭಾರತ್, ತ್ರಿವಳಿ ತಲಾಕ್,370ನೇ ವಿಧಿ ಜಾರಿಗೆ ತರುವಾಗಲೂವಿರೋಧ ವ್ಯಕ್ತಪಡಿಸಿದ್ದರು ಎಂದು ದೂರಿದರು.

ಕೃಷಿ ಕಾಯ್ದೆಗೆ ಮೂಲ ಕಾರಣಕರ್ತರುಕಾಂಗ್ರೆಸ್‌ನ ದಿಗ್ವಿಜಯ ಸಿಂಗ್‌, ಮನಮೋಹನ್ ಸಿಂಗ್. ಈ ವಿಷಯ ಅರಿಯದ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅವರನ್ನು ಪಕ್ಷದಿಂದ ಕಿತ್ತೊಗೆಯಬೇಕು ಎಂದು ಛೇಡಿಸಿದರು.

ಎಪಿಎಂಸಿ ಕಾಯ್ದೆಗೂ ಇತಿಹಾಸವಿದೆ. 1943ರಲ್ಲಿ ಜನ್ಮತಾಳಿತ್ತು. ಇಂದಿನವರೆಗೂಸಾಕಷ್ಟು ಬದಲಾವಣೆಗಳಾಗಿವೆ. ರೈತರಹಿತಸಾಕ್ತಿ ಗಮನದಲ್ಲಿ ಇಟ್ಟುಕೊಂಡು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.ಇದರಿಂದರೈತರು ಉತ್ಪನ್ನಗಳನ್ನುಸ್ಪರ್ಧಾತ್ಮಕ ದರಕ್ಕೆ ಮನೆ ಬಾಗಿಲಲ್ಲೇ ಮಾರಾಟ ಮಾಡಬಹುದು ಎಂದರು.

ಕೃಷಿ ಕ್ಷೇತ್ರದ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಕೈಗಾರಿಕಾ ಕ್ಷೇತ್ರ ಉಳಿಸಿಕೊಳ್ಳಲು ಈ ಕಾಯ್ದೆ ಅನುಕೂಲವಾಗಿದೆ.ಲೋಕಸಭಾ ಚುನಾವಣೆಸಮಯದ ಕಾಂಗ್ರೆಸ್ ಪ್ರಣಾಳಿಕೆಯಲ್ಲೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಪ್ರಸ್ತಾವವಿದೆ.ಹೀಗಿದ್ದರೂ ಕಾಂಗ್ರೆಸ್‌ಇಬ್ಬಂದಿತನತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ಪನ್ನಗಳ ಬೆಲೆ ಏರಿಕೆಯಾದರೆ ರೈತರಿಗೆ ಅನುಕೂಲ.ದರಕುಸಿದರೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನೀಡುತ್ತದೆ. ದಲ್ಲಾಳಿಗಳ ಕಾಟ ತಪ್ಪುತ್ತದೆ. ರೈತರ ಆದಾಯ ದ್ವಿಗುಣವಾಗುತ್ತದೆಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಮಾಜಿ ಸದಸ್ಯಎಂ.ಬಿ. ಭಾನುಪ್ರಕಾಶ್, ಶಾಸಕ ಕೆ.ಬಿ.ಅಶೋಕ್ ನಾಯ್ಕ, ಆರ್ಯ ವೈಶ್ಯ ಸಮಾಜ ಅಭಿವಋದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ‘ಸೂಡಾ’ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್, ಮುಖಂಡರಾದ ಎಸ್.ಎನ್.ಚನ್ನಬಸಪ್ಪ, ಜಗದೀಶ್, ಬಿ.ಆರ್.ಮಧುಸೂದನ್, ಕೆ.ವಿ.ಅಣ್ಣಪ್ಪ, ಎಸ್.ಜ್ಞಾನೇಶ್ವರ್, ಎಸ್.ದತ್ತಾತ್ರಿ,ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT